Athree Book Center

ಮೃಗಜಲದ ಬೆನ್ನೇರಿ

March 10, 2010 · 3 Comments

ಸುಮಾರು ನಲ್ವತ್ತು ವರ್ಷಗಳ ಹಿಂದಿನ ನನ್ನ ಅನುಭವ ಕಥನ – ತಾತಾರ್ ಶಿಖರಾರೋಹಣವನ್ನು ಮರುಕಥನಕ್ಕಿಳಿದು ನಾಲ್ಕು ಕಂತು ಕಳೆದಿದೆ. ಮೈಸೂರಿನ ದಖ್ಖಣ ಪರ್ವತಾರೋಹಣ ಸಂಸ್ಥೆಯ ತಂಡ, ಉದಕಮಂಡಲ ಶ್ರೇಣಿಯ, ಮುದುಮಲೈ ವನಧಾಮಾಂತರ್ಗತ ತಾತಾರ್ ಬೆಟ್ಟವನ್ನು ವಾತಾವರಣದ ವಿಪರೀತದಲ್ಲೂ ಏರುತ್ತೇರುತ್ತೇರುತ್ತಾ ಒತ್ತರಿಸಿ ಬಂದ ರಾತ್ರಿಗೆ ಆಕಸ್ಮಿಕವಾಗಿ ಒದಗಿದ ಬಂಡೆಮರೆಯಲ್ಲಿ ಶಿಬಿರ ಹೂಡಿದ್ದಾಗಿದೆ. ಅತ್ತ ಪೂರ್ವ ಪಾಕಿಸ್ತಾನದಲ್ಲಿ ಬಾಂಗ್ಲಾ ವಿಮೋಚನೆಯ ಸಮರದಲ್ಲಿ ತೊಡಗಿದ ಭಾರತೀಯ ಸೇನೆಯ ವೀರಗಾಥೆಯನ್ನು ತುಣುಕು ರೆಡಿಯೋ ವರದಿಗಳಲ್ಲಿ ಸ್ಫೂರ್ತಿಪೇಯದಂತೆ ಹೀರುತ್ತಾ ಸಾಗಿದ ಪ್ರಾಕೃತಿಕ ಸಾಹಸಯಾನಕ್ಕಿಲ್ಲಿ ಶಿಖರಯೋಗ ಕಾಣಿಸುವ ಹಂತ ಬಂದಿದೆ. ನಿನ್ನೆಯ ಅನ್ನಕ್ಕೆ ಇಂದಿನ ವಗ್ಗರಣೆ ಎಂಬ ತಾತ್ಸಾರ ಕಳೆದು, ಹಿಂದಿನ ಸಾಧನೆ ಮುಂದಕ್ಕೆ ಪ್ರೇರಣೆ ಎಂಬ ಉತ್ಸಾಹ ತಳೆದು ಬನ್ನಿ, ಹೊರಡೋಣ ಸವಾರಿ…
Keep reading →

→ 3 CommentsCategories: ಪ್ರವಾಸ ಕಥನ · ವನ್ಯಲೋಕ

ಮೌಲ್ಯಗಳ ಪುಡಾರೀಕರಣ

March 5, 2010 · 4 Comments

ಗತಕಥನದ ಲಹರಿಯಲ್ಲಿ ವರ್ತಮಾನ ಕಳೆದುಹೋಗದಂತೆ ಈ ವಾರ ಮತ್ತೆ ತಾತಾರ್ ತಡೆದಿದ್ದೇನೆ. ಹಸಿವು ಹೆಚ್ಚಿಸಿ ತಿನಿಸು ಮೆಚ್ಚಿಸುವ ರೀತಿಯಲ್ಲಿ ಇಲ್ಲೊಂದು ಕಟುಕರೋಹಿಣಿ ಕಷಾಯ ಕಾಯಿಸಿ ಇಟ್ಟಿದ್ದೇನೆ. ನಿಧಾನಕ್ಕೆ ತಗೊಳಿ,  ಸೆರೆ ಸಿಕ್ಕೀತು, ಹುಶಾರ್!

ನನ್ನ ಪುಸ್ತಕೋದ್ಯಮದ (ಖರೀದಿ, ಮಾರಾಟ ಮತ್ತು ಪ್ರಕಟಣೆ) ಅನುಭವಗಳಲ್ಲಿ ‘ಅಪೂರ್ವ ಸ್ವಾದ’ ಕಂಡದ್ದೂ ಇದೆ, ‘ತುತ್ತಿನ ಕಲ್ಲು’ ಉಗುಳಿದ್ದೂ ಇದೆ. ಆದರೆ ಇವುಗಳಲ್ಲಿ ವೈಯಕ್ತಿಕತೆಯನ್ನು ಮೀರಿ, ಸಾಮಾಜಿಕ ಕುಶಿ ಅಥವಾ ಚಿಂತನೆಯ ಭಾಗಗಳಾಗುವಂತವನ್ನು ಎಚ್ಚರದಿಂದ ಸಾರ್ವಜನಿಕದಲ್ಲಿ ಹಂಚಿಕೊಂಡಿದ್ದೇನೆ. ಹಾಲಾಹಲವಾದರೆ ನೀಲಕಂಠನಾದರೂ ಸರಿ, ಅಮೃತ ಮೂಡಿದರೆ ಮೋಹಿನಿಯಾಗಲೇಬೇಕು (ಅನ್ಯಾರ್ಥಗಳನ್ನು ಮರೆತುಬಿಡಿ). ಈ ಮರೆಯಬಾರದ ಸಂಕೇತಗಳ ಪ್ರೇರಣೆಯಲ್ಲಿ ಫೆಬ್ರುವರಿ ೨೩ಕ್ಕೆ ನಾನು ಕೆಳಗೆ ಕಾಣಿಸಿದ ಲೇಖನ ಬರೆದೆ. ಮಿಂಚಂಚೆಯಲ್ಲಿ ಉದಯವಾಣಿಯ ಗೆಳೆಯ ಸತ್ಯಗಣಪತಿಗೆ ಕಳಿಸಿ “ಬೇಕೇ” ಕೇಳಿದೆ. ನನ್ನ ಕಾತರಕ್ಕೆ ಆತ ಉತ್ತರಿಸಲಿಲ್ಲ; ನಿರೀಕ್ಷೆ ಮೀರಿದ ಚುರುಕಿನಲ್ಲಿ ಮರುದಿನವೇ ಪ್ರಕಟಿಸಿಬಿಟ್ಟರು!

ಇಂದು ಮಾಧ್ಯಮಗಳ ವೈವಿಧ್ಯಕ್ಕೆ ತಕ್ಕಂತೆ ಸಂಪರ್ಕ ಸಾಧ್ಯತೆಗಳೂ ವಿಭಿನ್ನ. ಹಾಗಾಗಿ ಮೇ ಫ್ಲವರ್ ಮೀಡಿಯಾ ಹೌಸಿನ ಗೆಳೆಯ ಜಿ.ಎನ್. ಮೋಹನ್ನರಿಗೂ ಇದೇ ಲೇಖನವನ್ನು ದೂಡಿ (ಫಾರ್ವರ್ಡಿಸಿ), ಸೂಚಿಸಿದೆ, ‘ಇದು ಇಂದಿನ ಉದಯವಾಣಿಯಲ್ಲಿ ಪ್ರಕಟವಾಗಿದೆ. ನಿಮಗೆ ಬೇಕಾದಂತೆ ಬಳಸಿಕೊಳ್ಳಿ. ಅವರೂ ಮರುಕ್ಷಣದಲ್ಲಿ ತಮ್ಮ ‘ಅವಧಿ’ಯಲ್ಲಿ ಪ್ರಕಟಿಸಿದರು. ಈಗ ಮೊದಲು ಲೇಖನ ನೋಡಿ:

Keep reading →

→ 4 CommentsCategories: ಪುಸ್ತಕ ಲೋಕ

ಅಯನದ್ವಯಕ್ಕೂ ಭೀಷ್ಮ ಕಾಯ

February 25, 2010 · 2 Comments

(ತಾತಾರ್ ೪)

ತಾತಾರ್ ಶಿಖರಾರೋಹಣ ಪುಸ್ತಕವನ್ನು ಅಂದು (೧೯೭೨) ಪುಣೆಯಲ್ಲಿದ್ದ ನನ್ನ ಸೋದರತ್ತೆ ಸೀತಾ ಓದಿ ಕಾಲೆಳೆದಿದ್ದಳು, “ಇದು ‘ಕುದುರೆಮುಖದೆಡೆಗೆ’ ಬರೆದ ನಾರಣ್ಣಯ್ಯನೇ (ನನ್ನ ತಂದೆ) ಬರೆದುಕೊಟ್ಟಿರಬೇಕು.” ಕುದುರೆಮುಖದೆಡೆಗೆ (೧೯೬೮) ಬೆಂಗಳೂರು ವಿಶ್ವವಿದ್ಯಾನಿಲಯದ ಪಠ್ಯೇತರ ಪ್ರಕಟಣೆಗಳಲ್ಲಿ ಪ್ರಥಮ ಪುಸ್ತಕ. ಮುಂದೆ ಇದು ತಂದೆಯದೇ ಎನ್.ಸಿ.ಸಿ ದಿನಗಳಲ್ಲಿ, ಸವಾಲನ್ನು ಎದುರಿಸುವ ಛಲದಲ್ಲಿ ಮತ್ತು ಕೊನೆಯದಾಗಿ ಮುಗಿಯದ ಪಯಣದಲ್ಲಿ ಸಮಕಾಲೀನ ಆವಶ್ಯಕತೆಗಳಿಗನುಗುಣವಾಗಿ ಪರಿಷ್ಕೃತಗೊಂಡು ಮರುಮುದ್ರಣಗಳನ್ನೂ ಕಂಡಿದೆ. ತಂದೆಯ ಸಾಹಿತ್ಯ ಕೊಡುಗೆಗಳಲ್ಲಿ ಸರಸ ಶೈಲಿ, ಹಾಸ್ಯಪ್ರಜ್ಞೆಗಳಿಂದ ನಿರ್ವಿವಾದವಾಗಿ ಜನಪ್ರಿಯತೆಯನ್ನು ಗಳಿಸಿದ ಬರವಣಿಗೆಗಳು ಇಂಥವು. ಆದರೆ ತಂದೆ ಯಾವುದನ್ನು ತನ್ನ ಜೀವನದ ಪರಮಲಕ್ಷ್ಯ (ಕನ್ನಡದಲ್ಲಿ ವಿಜ್ಞಾನಸಾಹಿತ್ಯ ಪ್ರಸರಣ) ಎಂದು ಭಾವಿಸಿ (‘ವಿಜ್ಞಾನ ಎನ್ನಶನ’ ಎಂದೇ ಘೋಷಿಸಿ) ದುಡಿದರೋ ಅಲ್ಲಿ ಹೀಗಳೆವ ಕೆಲವು ಪ್ರಯತ್ನಗಳನ್ನು ಆಗಾಗ ಅನುಭವಿಸಿದ್ದುಂಟು. (ತಪ್ಪು ತಿಳಿಯಬೇಡಿ, ಅದರಿಂದ ವಿಷಾದ, ಸಂತ್ರಸ್ತತನದಂಥ ಭಾವಗಳು ಅವರನ್ನೆಂದೂ ಕಾಡಲಿಲ್ಲ.) ಕಳೆದ ವಾರ ‘ಕೆಂಡಸಂಪಿಗೆ’ಯಲ್ಲಿ ಕೆ.ವಿ ತಿರುಮಲೇಶ್ ಕೂಡಾ ಇಂಥದೇ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುತ್ತಿದ್ದಾಗ, ಅವರ ಬೆಂಬಲಕ್ಕೆ ತಂದೆಯ ಉದಾಹರಣೆ ಕೊಟ್ಟು ನನ್ನ ಮಿತಿಯ ನಾನೂ ನಾಲ್ಕು ಮಾತು ಹೊಸೆದೆ. ಮೊದಲು ಅದನ್ನಷ್ಟು ಉದ್ದರಿಸಿ, ನಿರುಮ್ಮಳವಾಗಿ ತಾತಾರಿನತ್ತದ ಯಾತ್ರೆ ಮುಂದುವರಿಸುತ್ತೇನೆ, ಸೇರಿಕೊಳ್ಳಿ, ಜೊತೆ ಬಿಡಬೇಡಿ.

Keep reading →

→ 2 CommentsCategories: ಪ್ರವಾಸ ಕಥನ · ವನ್ಯಲೋಕ

ಮರುಬಳಕೆಯ ನಾಲ್ಕು ಪ್ರಹಸನಗಳು

February 18, 2010 · 9 Comments

ಪುಸ್ತಕ ಅಂಗಡಿಯಲ್ಲಿ ಕಾಗದದ ಮರುಬಳಕೆಯ ಅವಕಾಶ ಅಸಂಖ್ಯ. ಅವನ್ನು ಆಡುನುಡಿಯಲ್ಲೇ ಹೇಳುವುದಾದರೆ ಕ್ಯಾಟಲಾಗು (ಬರಿಯ ಪಟ್ಟಿಯಲ್ಲ, ಪ್ರಚಾರ ಸಾಹಿತ್ಯವೂ ಆಗಬಹುದು), ಇನ್ವಿಟೇಶನ್ನು (ಅಂಗಡಿಯಲ್ಲಿ ವಿತರಿಸಬೇಕೆಂಬ ಬೇಡಿಕೆಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲೂ), ಪಬ್ಲಿಷರ್ಸ್ ಡಿಸ್ಟ್ರಿಬ್ಯೂಟರ್ಸ್ ಮತ್ತು ವಿವಿಧ ಇನ್ಸ್ಟಿಟ್ಯೂಶನ್ನುಗಳ ಸೆಲ್ಫ್ ಎಡ್ರೆಸ್ಸ್‌ಡ್ ಕವರ್ಸ್ ನಿತ್ಯ ಬರುತ್ತಿರುತ್ತವೆ. ಎಲ್ಲಾ ಬೆಸ್ಟ್ ಪೇಪರ್, ಸೈಜ್ ಮತ್ತು ಎಷ್ಟೋ ಭಾಗ ನೀಟಾಗಿ ಬ್ಲ್ಯಾಂಕ್ ಕೂಡಾ ಇದ್ದೇ ಇರುತ್ತವೆ. ಬಿಲ್ಲುಗಳ (ಅನಾವಶ್ಯಕ) ಎಕ್ಸ್ಟ್ರಾ ಕಾಪೀಸ್ (ಹೆಚ್ಚುವರಿ ಪ್ರತಿಗಳ ಹಿಂಬದಿ), ಕವರಿಂಗ್ ಲೆಟರ್ರು (ಮೇಲ್ಮುಚ್ಚುವ ಪತ್ರ?), ಮತ್ತೆ (ಸಾರ್ವಜನಿಕ ಸಾಗಣೆಯಲ್ಲಿ ಕಳಿಸಿದ್ದಾದರೆ) ಡ್ಯುಪ್ಲಿಕೇಟೋ ಟ್ರಿಪ್ಲಿಕೇಟೋ ಪ್ರತಿಗಳಲ್ಲಿ ಡೆಲಿವರಿ ಚಲನ್ನು ಸಹಾ ಬರುತ್ತವೆ. (ಅವನ್ನೆಲ್ಲ ನೇರಾನೇರ ಕನ್ನಡ ಶಬ್ದಗಳಲ್ಲಿ ಹೇಳುವುದೂ ಒಂದೇ ದೇವಭಾಷೆ ಬಿಟ್ಟ ಪುರೋಹಿತನೂ ಒಂದೇ!) ಅಗತ್ಯಕ್ಕಿಂತ ಹೆಚ್ಚಿಗೆ ಔಪಚಾರಿಕತೆಗೇ ವ್ಯರ್ಥವಾಗುವ ಇವನ್ನೆಲ್ಲ ಆವಶ್ಯಕತೆಯ ನೆಲೆಯಲ್ಲಿ ಕಡಿತಕ್ಕೊಳಪಡಿಸಲು ನಾನು ಬಳಸುವ ಅಸ್ತ್ರ ಮರುಬಳಕೆ. (ಹೆಚ್ಚಿನ ವಿದ್ಯಾಸಂಸ್ಥೆಗಳು ಪಾವತಿ ಕಳಿಸಲು ಪೂರ್ವಮುದ್ರಿತ ಮೇಲ್ಮುಚ್ಚುವ ಪತ್ರಗಳನ್ನಿಟ್ಟುಕೊಂಡಿರುತ್ತವೆ. ಸಹಜವಾಗಿ ಅದರ ಖಾಲಿ ಜಾಗಗಳಲ್ಲಿ ಪಡೆಯುವವರ ಹೆಸರು, ವಿಳಾಸ, ಖಾತೆಯ ವಿವರ ತುಂಬಿಬಿಡುತ್ತಾರೆ. ಕೆಲವೊಮ್ಮೆ ಸಂಸ್ಥಾ ಮುಖ್ಯಸ್ಥನ ರುಜು ರಬ್ಬರ್ ಮೊಹರು ಇರುತ್ತದೆ. ನಾನು ಕಳಿಸಲೇ ಬೇಕಾದ ರಸೀದಿ ಜೊತೆಗೆ ಆ ಪತ್ರಗಳಲ್ಲೇ ಕೃತಜ್ಞತೆಯ ಒಂದು ಸಾಲು ಕೈಯಾರೆ ಬರೆದುಬಿಡುತ್ತೇನೆ. ‘ಇದು ಅವಮಾನಕಾರಿ’ ಎಂದೊಬ್ಬ ಪ್ರಾಂಶುಪಾಲ ನನಗೆ ಹೇಳಿ ಕಳಿಸಿದ್ದರೂ ನಾನು ವ್ರತ ಬದಲಿಸಿಲ್ಲ!) ಅದರಲ್ಲಿ ಲಕೋಟೆಗಳ ಮರುಬಳಕೆಯಲ್ಲಿ ಉಂಟಾದ ಮೂರು ರಸಪ್ರಸಂಗಗಳನ್ನು ಮಾತ್ರ ಇಲ್ಲಿ ವಿಸ್ತರಿಸುತ್ತೇನೆ.

Keep reading →

→ 9 CommentsCategories: ಪುಸ್ತಕ ಲೋಕ