ರಂಗನಾಥ ವಿಜಯ ಭಾಗ ಏಳು
ಮಾನವ ಚಂದ್ರನ ಮೇಲಿಟ್ಟ ಮೊದಲ ಹೆಜ್ಜೆ ಮನುಕುಲಕ್ಕೆ ಏನೇ ಇರಲಿ, ಆರ್ಮ್ ಸ್ಟ್ರಾಂಗ್ ಎನ್ನುವ ವ್ಯಕ್ತಿಗೆ ಅದು ಮರಳುವಲ್ಲಿ ಅಷ್ಟಷ್ಟು ಒಜ್ಜೆಯೇ ಎಂಬುದನ್ನು ಯಾರೂ ಮರೆಯುವಂತಿಲ್ಲ. ನಮ್ಮ ಸ್ಥಿತಿಯೂ ಅದಕ್ಕೇನೂ ಕಡಿಮೆಯದ್ದಲ್ಲ. ‘ಗಗನಗಾಮಿತನ’ ದೊಡ್ಡ ಅನುಭವದ ಒಂದು ತುಣುಕು ಮಾತ್ರ. ಅದರ ಪೂರ್ಣತೆಗಾಗಿ ನಾವು ಬೇಗನೆ ಸ್ಮರಿಸಿಕೊಂಡೆವು – ಏರಿದವನಿಳಿಯಲೇಬೇಕು. ಹಾಂ, ಆದರೆ ಹೇಳಿದಷ್ಟು ಸುಲಭವಲ್ಲ ಬಂಡೆ ಇಳಿಯುವುದು. ಕಡಿದಾದ ಏರಿನಲ್ಲಿ ನಡೆಯನ್ನು ನಿರ್ದೇಶಿಸಲು ನಮ್ಮ ನೇರ ದೃಷ್ಟಿಯೊಡನೆ ಕೈಕಾಲುಗಳನ್ನು ತೊಡಗಿಸುತ್ತೇವೆ. ಹಾಗೇ ಇಳಿದರಾಯ್ತು ಎನ್ನುವಂತಿಲ್ಲ. ನಾವು ಹಲ್ಲಿ ಉಡಗಳಂತೆ ತಲೆಕೆಳಗಾಗಿ ಇಳಿಯುವ ಭಾಗ್ಯ ಪಡೆದಿಲ್ಲವಲ್ಲಾ! ಮತ್ತೆ ಕಾಲಿಗೇ ದೃಷ್ಟಿ ಸಂಯೋಜಿಸಿದರಾಯ್ತು ಎನ್ನಲು ನಾವು ಏಡಿಗಳಂತೆ ಚಾಚು ನೇತ್ರರೂ ಅಲ್ಲ. ಸೀದಾ ನಡೆದಿಳಿಯಲಾಗದ ಜಾರಿನಲ್ಲೆಲ್ಲಾ ನಾವು ಮೊದಲು ಪ್ರಪಾತಕ್ಕೆ ಬೆನ್ನು ಹಾಕಿ, ಕೈಗಳನ್ನು ಭದ್ರ ಹಿಡಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಅನಂತರ ಪ್ರತಿ ಹೆಜ್ಜೆಯಲ್ಲಿ ಇಳಿದಿಕ್ಕು ಸ್ಪಷ್ಟಪಡಿಸಿಕೊಳ್ಳುತ್ತಿರಬೇಕು. ಮತ್ತೆ ಏಣಿ ಇಳಿಯುವವನಂತೆ ಒಂದೊಂದೇ ಹೆಜ್ಜೆ ಕೆಳಬಿಟ್ಟು ‘ಮೆಟ್ಟಿಲು’ ದಕ್ಕುವವರೆಗೆ ಸಣ್ಣದಾಗಿ ಪರದಾಡಬೇಕು. ಮೇಲೆ ಹತ್ತುವಾಗ ಕೊಳ್ಳ ನಿರುಕಿಸುವ ಭಯದಿಂದ ವಿನಾಯ್ತಿ ಪಡೆದವರಿಗೆ ಇಲ್ಲಿ ಚಳಿ ಕೂರುವುದು ಖಾತ್ರಿ. ನೈಜ ಶಿಲಾರೋಹಣದಲ್ಲಿ ಹತ್ತಿದೆಲ್ಲಾ ಶಿಲಾಮುಖಗಳು ಇಳಿಯಲು ಹಾಗೇ ದಕ್ಕುತ್ತವೆ ಎಂದಿಲ್ಲ. ಹಾಗಾಗಿ ಕಡಿದಾದ ಶಿಲಾರೋಹಣದಲ್ಲಿ ‘ನೈಜ’ ಮತ್ತು ‘ಕೃತಕ’ ಎಂಬೆರಡು ಪಾಠ ಇದ್ದರೆ ಶುದ್ಧ ಶಿಲಾವರೋಹಣದಲ್ಲಿ ಹಗ್ಗಗಳನ್ನು ಬಳಸಿ ಮಾಡುವ ಕೃತಕ – ರ್ಯಾಪೆಲಿಂಗ್ (rapelling) ತಂತ್ರ ಒಂದೇ.
-
ಇತ್ತೀಚಿನ ಪ್ರತಿಕ್ರಿಯೆಗಳು…
- Praveen on ಬ್ಯಾಂಕ್ ಬ್ಯಾಂಕ್ ಭ್ಯಾಂಘ್!
- ಎ ವಿ ಗೋವಿಂದ ರಾವ್ on ಬ್ಯಾಂಕ್ ಬ್ಯಾಂಕ್ ಭ್ಯಾಂಘ್!
- Bedre Manjunath on ಯಕ್ಷಗಾನ ವಿಮರ್ಶೆಗಾಗಿ ದಾಕ್ಷಿಣ್ಯಬಿಟ್ಟವರು
- ML Samaga on ಮಹಾಲಿಂಗರು ಕಂಡ ಸಂಜೀವರ ಸಾಹಸ
- ML Samaga on ಮಹಾಲಿಂಗರು ಕಂಡ ಸಂಜೀವರ ಸಾಹಸ
-
ಇತ್ತೀಚಿನ ಬರವಣಿಗೆಗಳು…
ದಿಕ್ಸೂಚಿ…
ಈ ಹಿಂದೆ…
Blogroll
-
ಭೇಟಿ ನೀಡಿದವರು
- 36,414 ಜನರು
-
ಇತ್ತೀಚಿನ ಬರಹಗಳು
- ಬ್ಯಾಂಕ್ ಬ್ಯಾಂಕ್ ಭ್ಯಾಂಘ್!
- ಮಹಾಲಿಂಗರು ಕಂಡ ಸಂಜೀವರ ಸಾಹಸ
- ನಾನ್ಯಾಕೆ ಚೀಲ ಕೊಡುತ್ತಿಲ್ಲ?
- ಅತ್ರಿ – ಪುಸ್ತಕ ಪ್ರಕಾಶನವನ್ನು ಮುಚ್ಚಿದೆ!
- ಏರಿದವನಿಳಿಯಲೇಬೇಕು
- ಆಕಾಶ ಪಾತಾಳಗಳ ನಡುವೆ
- ಸಂದುಗೊಂದಿನಲ್ಲಿ ಉನ್ನತ ಚಿಂತನ
- ರಂಗನಂಘ್ರಿಗೆ ಮಣಿದೂ…
- ಮಹಾಲಿಂಗ ಭಟ್ಟರ ಅಂಕಣದಿಂದ
- ಇಷ್ಟಸಿದ್ಧಿ ಹೋಮಂ ಕರಿಷ್ಯೇ
- ಹೂಡಿದೆವು ಶಿಬಿರ – ರಂಗನಾಥ ಸ್ತಂಭ ವಿಜಯ ಭಾಗ ಎರಡು
- ಯಕ್ಷಗಾನ ವಿಮರ್ಶೆಗಾಗಿ ದಾಕ್ಷಿಣ್ಯಬಿಟ್ಟವರು
- ಕಾಪಾಡಿ! ಬಲಕೊಡೀ!!
- ನಿಮ್ಮನ್ನೇ ಕಾದಿದೆ ಲಕ್ಷ ದ್ವೀಪ!
- ಮಿನಿಕಾಯ್, ಕವರಟ್ಟಿ
ಈವರೆಗಿನ ಬರಹಗಳು…
ವಿಭಾಗಗಳು
ಸಂಪರ್ಕಿಸಿರಿ
ATHREE BOOK CENTER 4 Sharavathi Building, Balmatta Mangalore 575001 Karnataka Ph: 0824-2425161 email: athreebook@gmail.com


