ಸೈಕಲ್ ಕಾಣಿಸಿದ ಇನ್ನಷ್ಟು ಅಭಿವೃದ್ಧಿಯ ಕಥನಗಳು

ಸೈಕಲ್ ಕಾಣಿಸಿದ ಇನ್ನಷ್ಟು ಅಭಿವೃದ್ಧಿಯ ಕಥನಗಳು

ಅನ್ಯ ಕಾರ್ಯ ಒತ್ತಡಕ್ಕೆ ಸಿಕ್ಕಿ ತಳೆದಿದ್ದ ಐದು ದಿನಗಳ ಸೈಕಲ್ ಸನ್ಯಾಸ ಇಂದು ಸಂಜೆ ಮುರಿದೆ. ಬಂಟರ ಹಾಸ್ಟೆಲ್, ಮಲ್ಲಿಕಟ್ಟೆಗಾಗಿ ನಂತೂರು ಚಡಾವು ಹಿಡಿದೆ. ಅರ್ಧಾಂಶ ಕಾಂಕ್ರೀಟೀಕರಣ ಮುಗಿದಿದೆ. ಏಕಮುಖ ಸಂಚಾರದ ನಿರ್ಬಂಧ ಏರುವವರ ಪರವಾಗಿಯೇ ಇತ್ತು. ವೃತ್ತದಲ್ಲಿ ನೇರ ಸಾಗಿ, ಪದವು ಶಾಲೆ, ಯೆಯ್ಯಾಡಿ, ಬೊಂದೇಲ್, ಕಾವೂರು ವೃತ್ತ, ಮರಕಡ, ಫಲ್ಗುಣಿ ನದಿ ದಾಟಿ, ವಿಮಾನ ನಿಲ್ದಾಣದ ಹೊಸ ದಾರಿಯವರೆಗೂ ಓಟಕ್ಕೊಂದು ಚೂಪು ಇರಲಿಲ್ಲ. ಇಲ್ಲಿ ಹಳೆಯ ಆದ್ಯಪಾಡಿ ರಸ್ತೆಗೆ ಹೊಸ ಬಾಯಿ ಕೊಟ್ಟು, ಇಲಿ ಹಿಡಿಯಲೆಂದೇ ಭಾರೀ ಗುಡ್ಡ ಅಗೆದದ್ದರ ವರ್ತಮಾನ ನೋಡುವ ಉತ್ಸಾಹದಲ್ಲಿ ತಿರುಗಿದೆ. ಹೊಸದಾರಿ ಗಿಡ್ಡವಾದ್ದರಿಂದ ಏರುವ ಕೋನದಲ್ಲಿ ಏನೂ ವ್ಯತ್ಯಾಸವಾಗಿರಲಿಲ್ಲ. ಆದರೆ ಹರಹು, ತಿರುವಿನ ಬಳುಕು, ಸಂಧಿಸ್ಥಾನದ ಡಾಮರ್, ಮುಂದುವರಿದು ಕಾಂಕ್ರೀಟ್ ಹಾಸು ನಿರೀಕ್ಷೆಯಂತೆ ಅದ್ಭುತವಾಗಿಯೇ ಇದೆ.

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

ನಾನೊಂದು ಗಂಭೀರ ರಹಸ್ಯದಲ್ಲಿ ಸಿಕ್ಕಿಕೊಂಡೆನು

ನಾನೊಂದು ಗಂಭೀರ ರಹಸ್ಯದಲ್ಲಿ ಸಿಕ್ಕಿಕೊಂಡೆನು

ಅಧ್ಯಾಯ ನಲ್ವತ್ತೊಂಬತ್ತು [ಡೇವಿಡ್ ಕಾಪರ್ಫೀಲ್ಡ್‍ನ ಜೀವನ ವೃತ್ತಾಂತ ಮತ್ತು ಅನುಭವಗಳು, ಕಾದಂಬರಿ. ಮೂಲ...

read more
ಬೆಂಗಳೂರ ದಾಳಿಗೆ ಮಂಗಳೂರ ದಂಡು ಸಜ್ಜುಗೊಳ್ಳುತ್ತಿದೆ!

ಬೆಂಗಳೂರ ದಾಳಿಗೆ ಮಂಗಳೂರ ದಂಡು ಸಜ್ಜುಗೊಳ್ಳುತ್ತಿದೆ!

  ಗೆಳೆಯ ಕಾವೂರು ಪ್ರಸನ್ನನಿಗಿರುವ (ಗೊತ್ತಲ್ಲಾ ಸರ್ವೋ ಕೀಲೆಣ್ಣೆಗಳ ಪ್ರಾದೇಶಿಕ ವಿತರಕ) ಕಲ್ಲೆಣ್ಣೆ ಕಂಪೆನಿಗಳ...

read more