ಹಂಪಿ, ದುರ್ಗ, ಜಯ ಮಂಗಳಂ

ಹಂಪಿ, ದುರ್ಗ, ಜಯ ಮಂಗಳಂ

ದೈವಿಕ ಸಂಗತಿಗಳಲ್ಲಿ ನನಗೆ ಎಳ್ಳಷ್ಟೂ ವಿಶ್ವಾಸ ಇಲ್ಲ. ಆದರೂ ಯಾವುದೇ ಆರಾಧನಾ ವಿಧಾನಗಳು, ಸ್ಥಳ, ಮೂರ್ತಿಶಿಲ್ಪ, ಸಂಬಂಧಿಸಿದ ಭವ್ಯ ಭವನಗಳನ್ನು ಒಮ್ಮೆಯಾದರೂ ನೋಡುವ ಅವಕಾಶ ಒದಗಿದಾಗ ತಪ್ಪಿಸಿಕೊಂಡದ್ದಿಲ್ಲ. ಅವನ್ನು ಅವಮಾನಿಸುವುದಾಗಲೀ ಪ್ರಾಮಾಣಿಕವಾಗಿ ನಂಬಿದವರನ್ನು ಪರಿವರ್ತಿಸುವ ಹಠವಾಗಲೀ ನನ್ನದಲ್ಲ. ಬದಲಿಗೆ ರಚನೆಗಳ ವೈಭವವನ್ನೂ ಅದರ ಸೃಷ್ಟಿಕರ್ತ ಮನುಷ್ಯನ ವರ್ತನೆಗಳನ್ನೂ ಕಂಡುಕೊಳ್ಳುವ ಕುತೂಹಲ ನನ್ನದು. ಹಾಗಾಗಿ ಈ ಯಾನದಲ್ಲಿ ಡಾರ್ಜಿಲಿಂಗ್, ಕಾನ್ಹಾಗಳಂತೆ ಕಾಶಿ, ಗಯಾಗಳನ್ನೂ ಪಟ್ಟಿ ಮಾಡಿ ನೋಡಿದ್ದೆ. ಅಲ್ಲಿ ದೇವ ಬಿಂಬದ ದರ್ಶನ, ಔಪಚಾರಿಕ ನಮನ, ತೀರ್ಥ ಪ್ರಸಾದಗಳಿಗೆ ನಾನು ಅಂಟಿಕೊಂಡದ್ದಿಲ್ಲ. ಉದಾಹರಣೆಗೆ, ತಿರುಮಲೆಯಲ್ಲಿ ಎರಡು ದಿನವಿದ್ದೂ ವೆಂಕಟ್ರಮಣನ ದರ್ಶನ ಮಾಡಲೇ ಇಲ್ಲ. ಆದರೆ ಎಲ್ಲೂ ಅವಾಗಿ ಒದಗಿದಾಗ ಭಾವ ತುಮುಲಗಳೇನೂ ಇಲ್ಲದೇ ತೀರ್ಥ, ಗಂಧ, ಹೂ, ತುಳಸಿ ಇತ್ಯಾದಿಗಳನ್ನು ವಸ್ತು ನಿಷ್ಠವಾಗಿ ಗ್ರಹಿಸುತ್ತ ಬಂದಿದ್ದೇನೆ. ತಿರುಪತಿಯ ಲಡ್ಡು, ಮಧೂರಿನ ಅಪ್ಪ, ಕಾಶ್ಮೀರದ ಖೀರು, ಅನ್ನಾವರಂನ ಸಪಾದಭಕ್ಷ್ಯ, ಕೃಷ್ಣಮಠದ ಮಡ್ಡಿ, ಶರವಿನ ಪಂಚಕಜ್ಜಾಯ, ಅನೇಕಾನೇಕ ದೇವಳಗಳ ಊಟ ಮುಂತಾದವನ್ನು ಮನಮೆಚ್ಚಿ ಸ್ವೀಕರಿಸಿದ್ದೇನೆ.

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಕೊಡಗುಜಿಲ್ಲಾ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಭಾಷಣ

ಕೊಡಗುಜಿಲ್ಲಾ ೫ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ ಭಾಷಣ

ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ನಲ್ವತ್ತು ಅಧ್ಯಾಯ ೯೧ (ಮೂಲದಲ್ಲಿ ೬೨ರ ಭಾಗ) ತನು ಕನ್ನಡ, ಮನ...

read more