ಮೆಟ್ರೋದಲ್ಲಿ ಕಾಣೆಯಾದ ಮೂವರು!

ಮೆಟ್ರೋದಲ್ಲಿ ಕಾಣೆಯಾದ ಮೂವರು!

ಏಪ್ರಿಲ್ ೧೭, ೧೯೯೬ ಬುಧವಾರದ ಬೆಳಿಗ್ಗೆ ನಾವು ಸುಪ್ರಸನ್ನರಾಗಿಯೇ ಕಲ್ಕತ್ತ ರೈಲ್ವೇ ನಿಲ್ದಾಣವೇನೋ ತಲಪಿದ್ದೆವು. ಆದರೆ ಮತ್ತಿನ ಮೂರೂವರೆ ಗಂಟೆಗಳ ಅನಾವಶ್ಯಕ ಹೋರಾಟದಲ್ಲಿ ವಿಜಯಿಗಳಾದರೂ ಹಸಿ ಹೊಟ್ಟೆಯಲ್ಲಿ, ಕ್ರುದ್ಧ ಮನಸ್ಸಿನಲ್ಲಿ ಬೈಕುಗಳೊಡನೆ ಹೊರಬಿದ್ದೆವು. ಮೊದಲು ಬೈಕುಗಳ ಹೊಟ್ಟೆ, ಅನಂತರ ನಮ್ಮ ಹೊಟ್ಟೆ ತುಂಬಿಸಿಕೊಂಡೆವು. ಸೂರ್ಯ ಆಗಲೇ ಅಗ್ನಿವರ್ಷಕ್ಕೆ ತೊಡಗಿದ್ದ. (ಉಪಾಧ್ಯರ ವರದಿ -ಅಂದು ಮಧ್ಯಾಹ್ನದ ತಾಪಮಾನ ೪೩ ಡಿಗ್ರಿ) ಮೊದಲಲ್ಲೇ ಸರಳವಾಗಿ ಪೋಲಿಸರ ತಡೆ ಬಂತು. ಪ. ಬಂಗಾಳದಲ್ಲಿ ಆ ಕಾಲದಲ್ಲೇ ಸಹವಾರರಿಗೂ ಶಿರಸ್ತ್ರಾಣ ಕಡ್ಡಾಯವಿತ್ತು, ನಾವು ಒಯ್ದೇ ಇರಲಿಲ್ಲ. ನಮ್ಮ ಅಜ್ಞಾನವನ್ನು ಪೊಲಿಸರು ಮನ್ನಿಸಿದರು.ಮತ್ತೆ ನಿರ್ವಿಘ್ನವಾಗಿ…. ಗಂಗಾ ಬ್ರಹ್ಮಪುತ್ರ ನದಿಗಳ ಮುಖಜಭೂಮಿಯ ಸಾವಿರಾರು ಕುದುರುಗಳಲ್ಲಿ ವ್ಯಾಪಿಸಿರುವ ‘ಸುಂದರಬನ್ಸ್ ವ್ಯಾಘ್ರಧಾಮ’ದಂತದ್ದು ಜಗತ್ತಿನಲ್ಲೇ ಇನ್ನೊಂದಿಲ್ಲ. ಅದನ್ನು ನೋಡುವುದರಿಂದಲೇ ನಮ್ಮ ಎರಡನೇ ಭಾರತ ಸಾಹಸಯಾನವನ್ನು ಪ್ರಾರಂಭಿಸುವ ಯೋಜನೆ ನನ್ನದಿತ್ತು. ಅದಕ್ಕನುಕೂಲವಾಗುವಂತೆ ಕಲ್ಕತ್ತಾ ವಾಸ/ ದರ್ಶನವನ್ನು ಸ್ವಲ್ಪ ಹೆಚ್ಚೇ ಮಾಡಲು ನಮಗೆ ಒಳ್ಳೆಯ ಅವಕಾಶ ಒದಗಿಸಿದವರು ಸ್ವಾಮೀ ಜಗದಾತ್ಮಾನಂದ (೧೯೨೯-೨೦೧೮). ರಾಮಕೃಷ್ಣಾಶ್ರಮದ ಬಹು ಗೌರವಾನ್ವಿತ ಸಂನ್ಯಾಸಿಗಳಲ್ಲಿ ಜಗದಾತ್ಮಾನಂದರದು ದೊಡ್ಡ ಹೆಸರು. ಅಪ್ಪಟ ಕನ್ನಡಿಗರೇ ಆದ ಸ್ವಾಮೀಜೀ ತನ್ನ ಓದು, ಅಧ್ಯಯನ ಹಾಗೂ ಸಮಾಜಸೇವೆಗಳ ಅನುಭವಗಳನ್ನು ಕ್ರೋಢೀಕರಿಸಿ ಬರೆದ ‘ಬದುಕಲು ಕಲಿಯಿರಿ’ (೨ ಭಾಗಗಳು) ಪುಸ್ತಕವಂತೂ ಕನ್ನಡ ಪ್ರಕಾಶನರಂಗದಲ್ಲಿ ಅದ್ವಿತೀಯ ದಾಖಲೆಯನ್ನೇ ಮಾಡಿದೆ.

read more
ಒಡಿಶಾಕ್ಕೆ ಸ್ವಾಗತ – ಸುಂದರ, ಪ್ರಶಾಂತ, ಉದಾತ್ತ

ಒಡಿಶಾಕ್ಕೆ ಸ್ವಾಗತ – ಸುಂದರ, ಪ್ರಶಾಂತ, ಉದಾತ್ತ

ವಿದ್ಯಾ ಮನೋಹರ ಉಪಾಧ್ಯ ಇವರ ಪ್ರವಾಸ ಕಥನ - ಒಡಿಶಾದ ಒಡಲೊಳಗೆ (೧) ಅದೊಂದು ಸುಂದರ ಸಂಜೆ. ದೂರದರ್ಶನ ಭಾರತಿಯಲ್ಲಿ...

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

ಸುದರ್ಶನೋಪಖ್ಯಾನ

ಸುದರ್ಶನೋಪಖ್ಯಾನ

‘ಸಾಧ್ಯೋ ನಾರಾಯಣೋ ಹರಿ:’ ಎಂಬ ಘೋಷ ಉಕ್ತಿಯೊಡನೆ ಕಟೀಲಿನಲ್ಲಿ ಆಯೋಜಿತವಾದ ತಾಳಮದ್ದಳೆ ಸಪ್ತಾಹದಲ್ಲಿ ೨೦-೬-೨೦೧೩ರಂದು...

read more
ಕಡಲ ತಡಿಯ ಕೊಡಲಿಗೊರವರೊಡನೆ ಕಂಡ ಬೆಡಗು

ಕಡಲ ತಡಿಯ ಕೊಡಲಿಗೊರವರೊಡನೆ ಕಂಡ ಬೆಡಗು

ಜಿಟಿನಾರಾಯಣ ರಾಯರ ‘ಮುಗಿಯದ ಪಯಣ’ ವಿ-ಧಾರಾವಾಹಿಯ ಕಂತು ಒಂಬತ್ತು ಅಧ್ಯಾಯ ಇಪ್ಪತ್ತೊಂದು ನನ್ನ ಕ್ರಿಶ್ಚಿಯನ್ ಕಾಲೇಜ್...

read more
ಚಂದ್ರನ ನೈಸರ್ಗಿಕ ಪರಿಸ್ಥಿತಿ

ಚಂದ್ರನ ನೈಸರ್ಗಿಕ ಪರಿಸ್ಥಿತಿ

(ಮಾನವ, ಚಂದ್ರನ ಮೇಲೆ ಕಂತು ೯ ಮತ್ತು ಅಂತಿಮ) ಚಂದ್ರನ ನೈಸರ್ಗಿಕ ಪರಿಸ್ಥಿತಿಗಳ ವಿಚಾರ ವೀಕ್ಷಣೆ ಮತ್ತು ಪ್ರಯೋಗಗಳಿಂದ...

read more
ಬೆರಗಾಗಿ ನಗುತ್ತಿದ್ದ ಪುರಂದರ ವಿಠಲಾ

ಬೆರಗಾಗಿ ನಗುತ್ತಿದ್ದ ಪುರಂದರ ವಿಠಲಾ

(ಕ್ಷೇತ್ರ ದರ್ಶನದಲ್ಲೊಂದು ಸುತ್ತು ಭಾಗ ನಾಲ್ಕು) ಅಲಿಪಿರಿ ಮೆಟ್ಟಿಲಸಾಲು ಏರುವ ತಿರುಮಲದ ಮುಖ ಪ್ರಾಕೃತಿಕವಾಗಿ ತೀವ್ರ...

read more