ಮೆಟ್ರೋದಲ್ಲಿ ಕಾಣೆಯಾದ ಮೂವರು!

ಮೆಟ್ರೋದಲ್ಲಿ ಕಾಣೆಯಾದ ಮೂವರು!

ಏಪ್ರಿಲ್ ೧೭, ೧೯೯೬ ಬುಧವಾರದ ಬೆಳಿಗ್ಗೆ ನಾವು ಸುಪ್ರಸನ್ನರಾಗಿಯೇ ಕಲ್ಕತ್ತ ರೈಲ್ವೇ ನಿಲ್ದಾಣವೇನೋ ತಲಪಿದ್ದೆವು. ಆದರೆ ಮತ್ತಿನ ಮೂರೂವರೆ ಗಂಟೆಗಳ ಅನಾವಶ್ಯಕ ಹೋರಾಟದಲ್ಲಿ ವಿಜಯಿಗಳಾದರೂ ಹಸಿ ಹೊಟ್ಟೆಯಲ್ಲಿ, ಕ್ರುದ್ಧ ಮನಸ್ಸಿನಲ್ಲಿ ಬೈಕುಗಳೊಡನೆ ಹೊರಬಿದ್ದೆವು. ಮೊದಲು ಬೈಕುಗಳ ಹೊಟ್ಟೆ, ಅನಂತರ ನಮ್ಮ ಹೊಟ್ಟೆ ತುಂಬಿಸಿಕೊಂಡೆವು. ಸೂರ್ಯ ಆಗಲೇ ಅಗ್ನಿವರ್ಷಕ್ಕೆ ತೊಡಗಿದ್ದ. (ಉಪಾಧ್ಯರ ವರದಿ -ಅಂದು ಮಧ್ಯಾಹ್ನದ ತಾಪಮಾನ ೪೩ ಡಿಗ್ರಿ) ಮೊದಲಲ್ಲೇ ಸರಳವಾಗಿ ಪೋಲಿಸರ ತಡೆ ಬಂತು. ಪ. ಬಂಗಾಳದಲ್ಲಿ ಆ ಕಾಲದಲ್ಲೇ ಸಹವಾರರಿಗೂ ಶಿರಸ್ತ್ರಾಣ ಕಡ್ಡಾಯವಿತ್ತು, ನಾವು ಒಯ್ದೇ ಇರಲಿಲ್ಲ. ನಮ್ಮ ಅಜ್ಞಾನವನ್ನು ಪೊಲಿಸರು ಮನ್ನಿಸಿದರು.ಮತ್ತೆ ನಿರ್ವಿಘ್ನವಾಗಿ…. ಗಂಗಾ ಬ್ರಹ್ಮಪುತ್ರ ನದಿಗಳ ಮುಖಜಭೂಮಿಯ ಸಾವಿರಾರು ಕುದುರುಗಳಲ್ಲಿ ವ್ಯಾಪಿಸಿರುವ ‘ಸುಂದರಬನ್ಸ್ ವ್ಯಾಘ್ರಧಾಮ’ದಂತದ್ದು ಜಗತ್ತಿನಲ್ಲೇ ಇನ್ನೊಂದಿಲ್ಲ. ಅದನ್ನು ನೋಡುವುದರಿಂದಲೇ ನಮ್ಮ ಎರಡನೇ ಭಾರತ ಸಾಹಸಯಾನವನ್ನು ಪ್ರಾರಂಭಿಸುವ ಯೋಜನೆ ನನ್ನದಿತ್ತು. ಅದಕ್ಕನುಕೂಲವಾಗುವಂತೆ ಕಲ್ಕತ್ತಾ ವಾಸ/ ದರ್ಶನವನ್ನು ಸ್ವಲ್ಪ ಹೆಚ್ಚೇ ಮಾಡಲು ನಮಗೆ ಒಳ್ಳೆಯ ಅವಕಾಶ ಒದಗಿಸಿದವರು ಸ್ವಾಮೀ ಜಗದಾತ್ಮಾನಂದ (೧೯೨೯-೨೦೧೮). ರಾಮಕೃಷ್ಣಾಶ್ರಮದ ಬಹು ಗೌರವಾನ್ವಿತ ಸಂನ್ಯಾಸಿಗಳಲ್ಲಿ ಜಗದಾತ್ಮಾನಂದರದು ದೊಡ್ಡ ಹೆಸರು. ಅಪ್ಪಟ ಕನ್ನಡಿಗರೇ ಆದ ಸ್ವಾಮೀಜೀ ತನ್ನ ಓದು, ಅಧ್ಯಯನ ಹಾಗೂ ಸಮಾಜಸೇವೆಗಳ ಅನುಭವಗಳನ್ನು ಕ್ರೋಢೀಕರಿಸಿ ಬರೆದ ‘ಬದುಕಲು ಕಲಿಯಿರಿ’ (೨ ಭಾಗಗಳು) ಪುಸ್ತಕವಂತೂ ಕನ್ನಡ ಪ್ರಕಾಶನರಂಗದಲ್ಲಿ ಅದ್ವಿತೀಯ ದಾಖಲೆಯನ್ನೇ ಮಾಡಿದೆ.

read more
ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

ಟ್ರಿನ್ ಟ್ರಿನ್ – ಮೈಸೂರನ್ನು ಆವರಿಸಿದ ಸೈಕಲ್ಲು

(ಚಕ್ರೇಶ್ವರ ಪರೀಕ್ಷಿತ ೧೩) [ನನ್ನಮ್ಮ ಗಂಟುವಾತಕ್ಕೆ ಸೇರಿಬಂದ ವೃದ್ಧಾಪ್ಯದಿಂದ (೮೭ವರ್ಷ) ಬಹಳ ಬಳಲುತ್ತಲೇ ಇದ್ದಾಳೆ....

read more

Category

Latest Comments

  1. ಮಾನವತೆಯ ದೀಪ ಹಚ್ಚು ಅಂಧಕಾರವು ತೊಲಗಲಿ ಎಂದು ಬರೆದು ನಮ್ಮ ಭಾವ ಬೆಳಗಿದ ಜಿ.ಯಸ್ಸೆಸ್ ಅವರ ಕವಿತೆಯೇ ಜಯದೇವರ ರೂಪದಲ್ಲಿ ಕೃತಿಯಾಗಿ ಬೆಳಗುತ್ತಿರುವಂತೆ ಕಂಡಿತು.❤️

  2. ಜಯದೇವ ಸರ್ ಅವರದು ನಿಜಕ್ಕೂ ಅದ್ಭುತ ಸಾಧನೆ.. 2007ರಿಂದ2010ರ ವರೆಗೆ ನಾನು ಚಾಮರಾಜನಗರ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕನಾಗಿದ್ದಾಗ, ನಬಾರ್ಡ್ ಎಜಿಎಂ ವಿನಯ್ ಅವರ ಜೊತೆ ಆಗಾಗ…

  3. 1990ರ ಆಸುಪಾಸಿನಲ್ಲಿ ನಾನು ಹೈಸ್ಕೂಲ್ ಓದುತ್ತಿದ್ದೆ. ಆಗ ಗೆಳೆಯನೊಬ್ಬನಿಂದಾಗಿ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಪರಿಚಯ ಆಯಿತು. ಇಲ್ಲಿಗೆ ಬಂದು ಶಾಲಾ ಮಕ್ಕಳ ಡಾರ್ಮಿಟರಿ ಯಲ್ಲಿ ಒಂದೆರಡು…