ಟೆಹ್ರಿ ಅಣೆಕಟ್ಟು, ಕೇದಾರನಾಥ ವಿಜಯ!

ಟೆಹ್ರಿ ಅಣೆಕಟ್ಟು, ಕೇದಾರನಾಥ ವಿಜಯ!

ಭಾರತ ಸೀಳೋಟದ ಯೋಜನೆಯಲ್ಲಿ ನಾವು ಮಂಗಳೂರು ಬಿಡುವಂದು, ಅನ್ಯ ಮೂವರು ಗೆಳೆಯರು ದಿಲ್ಲಿಗೆ ನೇರ ಬಂದು, ತಂಡಕ್ಕೆ ಸೇರಿಕೊಳ್ಳುವುದಾಗಿ ಹೇಳಿದ್ದರು. ಅವರಿಗೆ ನಮ್ಮೊಡನೆ ಚತುರ್ಧಾಮವಾದರೂ ಅನುಭವಿಸುವ ಹುಚ್ಚು ಹತ್ತಿತ್ತು. ಆದರೆ ಆ ತ್ರಿಮೂರ್ತಿಗಳು ನನ್ನ ನಿರೀಕ್ಷೆಯಂತೆ ಭೋಪಾಲಕ್ಕೆ, ಕೊನೆಗೆ ದಿಲ್ಲಿಗೂ ಪತ್ರ ಖಾತ್ರಿ ಕೊಡಲೇ ಇಲ್ಲ. ನಾವು ದಿಲ್ಲಿ ಬಿಡುವವರೆಗೂ ದಿಲ್ಲಿಗೆ ಬಂದಂತೇ ಇರಲಿಲ್ಲ. ದಿಲ್ಲಿಗೆ ಬಂದಿದ್ದ ನನ್ನ ತಂದೆಯ ಪತ್ರದಲ್ಲಿ ಅವರ ಗೊಂದಲಗಳಷ್ಟೇ ತಿಳಿದಿತ್ತು.  ವಾಸ್ತವದಲ್ಲಿ, ನಾವು ದಿಲ್ಲಿ ಬಿಡುವ ದಿನ (೧೧-೫-೯೦), ಆ ಮೂವರು – ಕೆ. ಲಕ್ಷ್ಮೀನಾರಾಯಣ ರೆಡ್ಡಿ (ರೆಡ್ಡಿ) – ಪ್ರಾಧ್ಯಾಪಕ, ಮೋಹನ ಆಚಾರ್ಯ (ಮೋಹನ್) – ಕುಶಲ ಕರ್ಮಿ, ಮತ್ತು ಕಾವೂರು ಪ್ರಸನ್ನ – ಉದ್ಯಮಿ, ಮಂಗಳೂರಿನಲ್ಲಿ ರೈಲೇರಿದ್ದರು! ಆ ಕಾಲದಲ್ಲಿ ಕೊಂಕಣ ರೈಲ್ವೇ ಇರಲಿಲ್ಲ. ಇವರು ಗಾದೆಯ ‘ಕೊಂಕಣ (ಅರಕ್ಕೋಣಂಗಾಗಿ) ಸುತ್ತಿ ಮೈಲಾರಕ್ಕೆ (ದಿಲ್ಲಿಗೆ)’ ಬರುವಾಗ ೧೪-೫-೯೦ರ ರಾತ್ರಿ. ಪೂರ್ವ ಲೆಕ್ಕಾಚಾರದಂತೆ ಅವರಲ್ಲಿಬ್ಬರ ದಿಲ್ಲಿ ಗೆಳೆಯರು, ಮರು ಬೆಳಗ್ಗೆಯೇ (೧೫-೫-೯೦) ಇವರಿಗೆ ತಮ್ಮ ಬೈಕ್ ಒಪ್ಪಿಸಿದರು. ನನ್ನ ದಿನಚರಿಯ ನಕ್ಷೆಯ ಯಥಾ ಪ್ರತಿ ತ್ರಿಮೂರ್ತಿಗಳಲ್ಲಿತ್ತು. ಅದರ ಬಲದಲ್ಲಿ ನಮ್ಮನ್ನು ನೇರ ಗಂಗೋತ್ರಿಯಲ್ಲಿ ಹಿಡಿಯುವ ಉಮೇದಿನಲ್ಲಿ, ಹನ್ನೊಂದು ಗಂಟೆಗೆ ದಿಲ್ಲಿ ಬಿಟ್ಟರು. ಮೋಹನ್ ಒಂಟಿ, ಪ್ರಸನ್ನನ ಬೆಂಬಲಕ್ಕೆ ರೆಡ್ಡಿ.

read more

Category

Latest Comments

  1. ಮಾನ್ಯ ಜಯಂತರ ಬಗ್ಗೆ ಓದಿ ಬಹಳ ಸಂತೋಷವಾಯಿತು. ಬಹಳ ಸಜ್ಜನರಾಗಿದ್ದವರು. ಸಂಗೀತದಲ್ಲಿ ಬಹಳ ಪ್ರೀತಿಯಿದ್ದವರು. ಅವರ ತಂಗಿ ಶ್ಯಾಮಲಾ ನನ್ನ ಮಾವನವರ ಶಿಷ್ಯೆಯಾಗಿದ್ದವರು. ಈ ರೀತಿಯಾಗಿ ಅವರ…

  2. ಕ್ಷಮಿಸಿ, ನಾನು ನನ್ನದೇ ಜಾಲತಾಣಕ್ಕೆ ಹೊಸ ಲೇಖನಗಳನ್ನು ಹಾಕುವುದು ನಿಲ್ಲಿಸಿ ಹಲವು ಕಾಲವಾದ್ದರಿಂದ ಪ್ರತಿಕ್ರಿಯೆಗಳೇನಾದರೂ ಬಂದಿವೆಯೇ ಎಂದು ಇಣುಕಿ ನೋಡುವುದನ್ನೂ ಕಡಿಮೆ ಮಾಡಿ, ನಿಮ್ಮ ಇಷ್ಟು ವಿವರವಾದ…

ಉಲ್ಲಾಸ್ ಕರೆದಲ್ಲಿಗೆ ಹುಲಿ ಬರುತ್ತೆ!

(ಕುಮಾರಪರ್ವತದ ಆಸುಪಾಸು -೧೧) ನಾಗರಹೊಳೆಯ ವನ್ಯ ಜಾನುವಾರು ಗಣತಿಯಲ್ಲಿ ಭಾಗಿಗಳಾಗಿದ್ದ ನಮ್ಮಲ್ಲಿ ಕೆಲವರನ್ನು ಒಂದು...

read more