ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’

ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’

ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ…) ಗಹನತೆ ಅಡಿ, ಮೀಟರ್‍ಗಳಲ್ಲಿ ಹೇಳಿದರೆ ಮುಟ್ಟುವುದಿಲ್ಲ. ಅವರಿಗೆ ನಿತ್ಯ ಕಾಣುವ ಬಲ್ಲೇರಿ, ಕಳಂಜಿಮಲೆ, ಬಿರುಮಲೆ, ಬಂಟಮಲೆಗಳೇ ನಿಜದ ಅಳತೆಗೋಲು. ನಾನು ಅವನ್ನೂ ಅನುಭವಿಸುವ ಸರಣಿಯಲ್ಲಿ, ಒಂದು ಮಳೆ ದಿನದ ಬೆಳಿಗ್ಗೆ ಬಂಟಮಲೆ ಆಯ್ದುಕೊಂಡಿದ್ದೆ. ತಂಡ ನಾಲ್ಕು ಬೈಕೇರಿ, ಪಂಜ ತಲಪಿತ್ತು. ಮತ್ತೆ ಅಲ್ಲಿ ಇಲ್ಲಿ ವಿಚಾರಿಸುತ್ತ ಸುಮಾರು ಹನ್ನೊಂದು ಕಿಮೀ ಕಳೆದು, ಬಿಳಿಮಲೆಯಲ್ಲಿದ್ದ ಪುರುಷೋತ್ತಮರ ಮನೆ ಸೇರಿದ್ದು ಒಂದು ಆಕಸ್ಮಿಕ. ಪುರುಷೋತ್ತಮರು ಆ ದಿನಗಳಲ್ಲಿ ಮಂಗಳೂರು ವಿವಿ ನಿಲಯದಲ್ಲಿದ್ದರು (೧೯೮೭). ಹಾಗಾಗಿ ಅವರು ನಮಗೆ ಮನೆಯಲ್ಲಿ ಸಿಗಲಿಲ್ಲ. ನಾವು ಬೈಕು, ಜಿಗಣೆಗೆ ಬೆದರಿದ ಅಭಯ, ಜತೆಗೆ ದೇವಕಿಯನ್ನು ಪುರುಷೋತ್ತಮರ ತಾಯಿಗೊಪ್ಪಿಸಿ, ಕಾಡು ನುಗ್ಗಿದ್ದೆವು. ಸುಮಾರು ಎರಡು ಗಂಟೆಯ ಅವಧಿಯಲ್ಲಿ, ಶಿಖರ ವಲಯವನ್ನು ತಲಪಿ ಸುತ್ತಾಡಿ, ಬುತ್ತಿಯೂಟ ಮಾಡಿ ಮುಗಿಸಿದ್ದೆವು. ಅನಂತರ ಉತ್ಸಾಹದಲ್ಲಿ ಇಳಿಯುತ್ತ ಮಳೆ, ಮಂಜು, ಹುಲ್ಲು, ಪೊದರುಗಳ ಫಿತೂರಿಯಲ್ಲಿ ದಿಕ್ಕು ತಪ್ಪಿ ತಲಪಿದ್ದು ಎದುರು ಮೈಯ ಏರಿಮಲೆ, ಗುತ್ತಿಗಾರು. ಮತ್ತೆ ಬಾಡಿಗೆ ವಾಹನ ಹಿಡಿದು ಪಂಜಕ್ಕಾಗಿ ಬಿಳಿಮಲೆ ಸೇರಿ, ಮರಳಿದ ಪ್ರಕರಣ ಸುಖಾಂತ ಸಾಹಸವೇ ಅನ್ನಿಸಿತ್ತು.

read more

Category

Latest Comments

  1. ಮಾನವತೆಯ ದೀಪ ಹಚ್ಚು ಅಂಧಕಾರವು ತೊಲಗಲಿ ಎಂದು ಬರೆದು ನಮ್ಮ ಭಾವ ಬೆಳಗಿದ ಜಿ.ಯಸ್ಸೆಸ್ ಅವರ ಕವಿತೆಯೇ ಜಯದೇವರ ರೂಪದಲ್ಲಿ ಕೃತಿಯಾಗಿ ಬೆಳಗುತ್ತಿರುವಂತೆ ಕಂಡಿತು.❤️

  2. ಜಯದೇವ ಸರ್ ಅವರದು ನಿಜಕ್ಕೂ ಅದ್ಭುತ ಸಾಧನೆ.. 2007ರಿಂದ2010ರ ವರೆಗೆ ನಾನು ಚಾಮರಾಜನಗರ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕನಾಗಿದ್ದಾಗ, ನಬಾರ್ಡ್ ಎಜಿಎಂ ವಿನಯ್ ಅವರ ಜೊತೆ ಆಗಾಗ…

  3. 1990ರ ಆಸುಪಾಸಿನಲ್ಲಿ ನಾನು ಹೈಸ್ಕೂಲ್ ಓದುತ್ತಿದ್ದೆ. ಆಗ ಗೆಳೆಯನೊಬ್ಬನಿಂದಾಗಿ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಪರಿಚಯ ಆಯಿತು. ಇಲ್ಲಿಗೆ ಬಂದು ಶಾಲಾ ಮಕ್ಕಳ ಡಾರ್ಮಿಟರಿ ಯಲ್ಲಿ ಒಂದೆರಡು…

ಉಲ್ಲಾಸ್ ಕರೆದಲ್ಲಿಗೆ ಹುಲಿ ಬರುತ್ತೆ!

(ಕುಮಾರಪರ್ವತದ ಆಸುಪಾಸು -೧೧) ನಾಗರಹೊಳೆಯ ವನ್ಯ ಜಾನುವಾರು ಗಣತಿಯಲ್ಲಿ ಭಾಗಿಗಳಾಗಿದ್ದ ನಮ್ಮಲ್ಲಿ ಕೆಲವರನ್ನು ಒಂದು...

read more