ರೈಲ್ವೇಯಲ್ಲಿ ಪ್ರಭಾವ, ವಿಭಾವಗಳು

ರೈಲ್ವೇಯಲ್ಲಿ ಪ್ರಭಾವ, ವಿಭಾವಗಳು

(ಭಾರತ ಅ-ಪೂರ್ವ ಕರಾವಳಿಯೋಟ – ೨) ೧೯೯೬ರ ಏಪ್ರಿಲ್ ಹದಿನಾಲ್ಕರಂದು ಮೋಟಾರ್ ಬೈಕ್ ಏರದೇ ನಮ್ಮ ಬೈಕ್ ಮಹಾಯಾನ ಮೊದಲ್ಗೊಂಡಿತ್ತು. ಅಂದು ಬೆಳಿಗ್ಗೆ ಕಿಶೋರ್ ಮತ್ತು ನಾನು ಬೈಕುಗಳನ್ನು ಮಂಗಳೂರು ರೈಲ್ವೇ ನಿಲ್ದಾಣಕ್ಕೊಯ್ದು ಗೆಳೆಯ ಕಿಶನ್ ಬಂಗೇರಾರ (ಇವರು ನಿಲ್ದಾಣದ ಸ್ವಾಗತಕಾರ) ಸಹಾಯಕರಿಗೊಪ್ಪಿಸಿದೆವು. ಬೈಕ್ ಯಾನದ ನಾಲ್ವರ ರೈಲ್ವೇ ಪ್ರಯಾಣದ ಟಿಕೇಟ್ ಒಟ್ಟು ರೂ. ೧೪೨೦/-ಶುಲ್ಕ ಕೊಟ್ಟು (ಮೂರು ಅಟ್ಟಳಿಗೆ ಮಲಗು ಸೌಕರ್ಯದ ಮೂರನೇ ದರ್ಜೆ ಡಬ್ಬಿ) ತಿಂಗಳ ಮುಂಚೆಯೇ ಕಾಯ್ದಿರಿಸಿದ್ದಾಗಿತ್ತು. ಈಗ ಬೈಕುಗಳಿಗೆ ‘ಪ್ಯಾಕಿಂಗ್’ ಶಾಸ್ತ್ರ ಮಾಡಿಸಿ, ಪ್ರಯಾಣದ ಟಿಕೆಟ್ಟಿಗೆ ಲಗತ್ತಿಸಿದಂತೆ ಬ್ರೇಕ್ ವ್ಯಾನ್ ಶುಲ್ಕ ರೂ ೧೩೪೦ ಕೊಟ್ಟು ರಸೀದಿ ಮಾಡಿಸಿಕೊಂಡು ಬಂದೆವು. ಸಂಜೆಗೆ ಉಪಾಧ್ಯರು ಸಾಲಿಗ್ರಾಮದಿಂದ ನಮ್ಮ ಮನೆಗೇ ಬಂದು ಸೇರಿಕೊಂಡರು. ಬೇಗನೇ ಊಟದ ಶಾಸ್ತ್ರ ಮುಗಿಸಿ, ಕತ್ತಲ ಪರದೆ ಬೀಳುತ್ತಿದ್ದಂತೆ, ನಾವು ಮೂವರು ಗಂಟು ಗದಡಿ ಸಮೇತ ರಿಕ್ಷಾ ಏರಿ ರೈಲ್ವೇ ನಿಲ್ದಾಣ ಸೇರಿಕೊಂಡೆವು. ಕಿಶೋರ್ ಪ್ರತ್ಯೇಕವಾಗಿ ಬಂದರು. ಬೈಕುಗಳು ನಮಗೂ ಮೊದಲೇ ರೈಲೇರಿ ಕುಳಿತಿದ್ದವು.

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ನೆನಪಿನ ಪುಟ ಸೇರಿದ ಶಿಲಾಯುಗದ ‘ಪಾಂಡವರಕಲ್ಲು’

ನೆನಪಿನ ಪುಟ ಸೇರಿದ ಶಿಲಾಯುಗದ ‘ಪಾಂಡವರಕಲ್ಲು’

ಪೀಠಿಕೆ ಪ್ರಾಕೃತಿಕ ಶೋಧನೆಗಳ ಅಲೆದಾಟದಲ್ಲಿ ನಾನು ಕೆಲವು (ಐತಿಹಾಸಿಕವೂ ಸೇರಿದಂತೆ) ಮಹತ್ವದ ರಚನೆಗಳನ್ನು...

read more
ಏಕವ್ಯಕ್ತಿ ಪ್ರಯೋಗ: ವಾಮನತೆಯಿಂದ ತ್ರಿವಿಕ್ರಮತ್ವಕ್ಕೆ

ಏಕವ್ಯಕ್ತಿ ಪ್ರಯೋಗ: ವಾಮನತೆಯಿಂದ ತ್ರಿವಿಕ್ರಮತ್ವಕ್ಕೆ

ಹಣ್ಣು ಬಂದಿದೆ, ಕೊಳ್ಳಿರೋ: ಏಕವ್ಯಕ್ತಿ ಯಕ್ಷಗಾನ ಪ್ರಯೋಗಕ್ಕೀಗ ಹತ್ತು ಮೀರಿದ ಹರಯ, ಸಾವಿರಕ್ಕೂ ಮಿಕ್ಕ ಪ್ರದರ್ಶನಗಳ...

read more