ಮೆಟ್ರೋದಲ್ಲಿ ಕಾಣೆಯಾದ ಮೂವರು!

ಮೆಟ್ರೋದಲ್ಲಿ ಕಾಣೆಯಾದ ಮೂವರು!

ಏಪ್ರಿಲ್ ೧೭, ೧೯೯೬ ಬುಧವಾರದ ಬೆಳಿಗ್ಗೆ ನಾವು ಸುಪ್ರಸನ್ನರಾಗಿಯೇ ಕಲ್ಕತ್ತ ರೈಲ್ವೇ ನಿಲ್ದಾಣವೇನೋ ತಲಪಿದ್ದೆವು. ಆದರೆ ಮತ್ತಿನ ಮೂರೂವರೆ ಗಂಟೆಗಳ ಅನಾವಶ್ಯಕ ಹೋರಾಟದಲ್ಲಿ ವಿಜಯಿಗಳಾದರೂ ಹಸಿ ಹೊಟ್ಟೆಯಲ್ಲಿ, ಕ್ರುದ್ಧ ಮನಸ್ಸಿನಲ್ಲಿ ಬೈಕುಗಳೊಡನೆ ಹೊರಬಿದ್ದೆವು. ಮೊದಲು ಬೈಕುಗಳ ಹೊಟ್ಟೆ, ಅನಂತರ ನಮ್ಮ ಹೊಟ್ಟೆ ತುಂಬಿಸಿಕೊಂಡೆವು. ಸೂರ್ಯ ಆಗಲೇ ಅಗ್ನಿವರ್ಷಕ್ಕೆ ತೊಡಗಿದ್ದ. (ಉಪಾಧ್ಯರ ವರದಿ -ಅಂದು ಮಧ್ಯಾಹ್ನದ ತಾಪಮಾನ ೪೩ ಡಿಗ್ರಿ) ಮೊದಲಲ್ಲೇ ಸರಳವಾಗಿ ಪೋಲಿಸರ ತಡೆ ಬಂತು. ಪ. ಬಂಗಾಳದಲ್ಲಿ ಆ ಕಾಲದಲ್ಲೇ ಸಹವಾರರಿಗೂ ಶಿರಸ್ತ್ರಾಣ ಕಡ್ಡಾಯವಿತ್ತು, ನಾವು ಒಯ್ದೇ ಇರಲಿಲ್ಲ. ನಮ್ಮ ಅಜ್ಞಾನವನ್ನು ಪೊಲಿಸರು ಮನ್ನಿಸಿದರು.ಮತ್ತೆ ನಿರ್ವಿಘ್ನವಾಗಿ…. ಗಂಗಾ ಬ್ರಹ್ಮಪುತ್ರ ನದಿಗಳ ಮುಖಜಭೂಮಿಯ ಸಾವಿರಾರು ಕುದುರುಗಳಲ್ಲಿ ವ್ಯಾಪಿಸಿರುವ ‘ಸುಂದರಬನ್ಸ್ ವ್ಯಾಘ್ರಧಾಮ’ದಂತದ್ದು ಜಗತ್ತಿನಲ್ಲೇ ಇನ್ನೊಂದಿಲ್ಲ. ಅದನ್ನು ನೋಡುವುದರಿಂದಲೇ ನಮ್ಮ ಎರಡನೇ ಭಾರತ ಸಾಹಸಯಾನವನ್ನು ಪ್ರಾರಂಭಿಸುವ ಯೋಜನೆ ನನ್ನದಿತ್ತು. ಅದಕ್ಕನುಕೂಲವಾಗುವಂತೆ ಕಲ್ಕತ್ತಾ ವಾಸ/ ದರ್ಶನವನ್ನು ಸ್ವಲ್ಪ ಹೆಚ್ಚೇ ಮಾಡಲು ನಮಗೆ ಒಳ್ಳೆಯ ಅವಕಾಶ ಒದಗಿಸಿದವರು ಸ್ವಾಮೀ ಜಗದಾತ್ಮಾನಂದ (೧೯೨೯-೨೦೧೮). ರಾಮಕೃಷ್ಣಾಶ್ರಮದ ಬಹು ಗೌರವಾನ್ವಿತ ಸಂನ್ಯಾಸಿಗಳಲ್ಲಿ ಜಗದಾತ್ಮಾನಂದರದು ದೊಡ್ಡ ಹೆಸರು. ಅಪ್ಪಟ ಕನ್ನಡಿಗರೇ ಆದ ಸ್ವಾಮೀಜೀ ತನ್ನ ಓದು, ಅಧ್ಯಯನ ಹಾಗೂ ಸಮಾಜಸೇವೆಗಳ ಅನುಭವಗಳನ್ನು ಕ್ರೋಢೀಕರಿಸಿ ಬರೆದ ‘ಬದುಕಲು ಕಲಿಯಿರಿ’ (೨ ಭಾಗಗಳು) ಪುಸ್ತಕವಂತೂ ಕನ್ನಡ ಪ್ರಕಾಶನರಂಗದಲ್ಲಿ ಅದ್ವಿತೀಯ ದಾಖಲೆಯನ್ನೇ ಮಾಡಿದೆ.

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಡಾ| ಕಾಕುಂಜೆ ಗೋಪಾಲ ಕೃಷ್ಣ ಭಟ್ (ಅಡ್ಡಹೊಳೆ ಆಸುಪಾಸು ಭಾಗ ಎರಡು)

ಡಾ| ಕಾಕುಂಜೆ ಗೋಪಾಲ ಕೃಷ್ಣ ಭಟ್ (ಅಡ್ಡಹೊಳೆ ಆಸುಪಾಸು ಭಾಗ ಎರಡು)

ಕಳೆದ ಬಾರಿ ಉಲ್ಲಾಸ ಕಾರಂತರನ್ನು ಸಣ್ಣದಾಗಿ ಅಭಿನಂದಿಸಿ, ಅವರು ಪ್ರತಿನಿಧಿಸುವ ವನ್ಯಾಭಿಯಾನವನ್ನೇ ವಿಸ್ತರಿಸಿದ್ದೆ....

read more
ನೆನಪಿನ ಪುಟ ಸೇರಿದ ಶಿಲಾಯುಗದ ‘ಪಾಂಡವರಕಲ್ಲು’

ನೆನಪಿನ ಪುಟ ಸೇರಿದ ಶಿಲಾಯುಗದ ‘ಪಾಂಡವರಕಲ್ಲು’

ಪೀಠಿಕೆ ಪ್ರಾಕೃತಿಕ ಶೋಧನೆಗಳ ಅಲೆದಾಟದಲ್ಲಿ ನಾನು ಕೆಲವು (ಐತಿಹಾಸಿಕವೂ ಸೇರಿದಂತೆ) ಮಹತ್ವದ ರಚನೆಗಳನ್ನು...

read more
ಏಕವ್ಯಕ್ತಿ ಪ್ರಯೋಗ: ವಾಮನತೆಯಿಂದ ತ್ರಿವಿಕ್ರಮತ್ವಕ್ಕೆ

ಏಕವ್ಯಕ್ತಿ ಪ್ರಯೋಗ: ವಾಮನತೆಯಿಂದ ತ್ರಿವಿಕ್ರಮತ್ವಕ್ಕೆ

ಹಣ್ಣು ಬಂದಿದೆ, ಕೊಳ್ಳಿರೋ: ಏಕವ್ಯಕ್ತಿ ಯಕ್ಷಗಾನ ಪ್ರಯೋಗಕ್ಕೀಗ ಹತ್ತು ಮೀರಿದ ಹರಯ, ಸಾವಿರಕ್ಕೂ ಮಿಕ್ಕ ಪ್ರದರ್ಶನಗಳ...

read more