ಮೆಟ್ರೋದಲ್ಲಿ ಕಾಣೆಯಾದ ಮೂವರು!

ಮೆಟ್ರೋದಲ್ಲಿ ಕಾಣೆಯಾದ ಮೂವರು!

ಏಪ್ರಿಲ್ ೧೭, ೧೯೯೬ ಬುಧವಾರದ ಬೆಳಿಗ್ಗೆ ನಾವು ಸುಪ್ರಸನ್ನರಾಗಿಯೇ ಕಲ್ಕತ್ತ ರೈಲ್ವೇ ನಿಲ್ದಾಣವೇನೋ ತಲಪಿದ್ದೆವು. ಆದರೆ ಮತ್ತಿನ ಮೂರೂವರೆ ಗಂಟೆಗಳ ಅನಾವಶ್ಯಕ ಹೋರಾಟದಲ್ಲಿ ವಿಜಯಿಗಳಾದರೂ ಹಸಿ ಹೊಟ್ಟೆಯಲ್ಲಿ, ಕ್ರುದ್ಧ ಮನಸ್ಸಿನಲ್ಲಿ ಬೈಕುಗಳೊಡನೆ ಹೊರಬಿದ್ದೆವು. ಮೊದಲು ಬೈಕುಗಳ ಹೊಟ್ಟೆ, ಅನಂತರ ನಮ್ಮ ಹೊಟ್ಟೆ ತುಂಬಿಸಿಕೊಂಡೆವು. ಸೂರ್ಯ ಆಗಲೇ ಅಗ್ನಿವರ್ಷಕ್ಕೆ ತೊಡಗಿದ್ದ. (ಉಪಾಧ್ಯರ ವರದಿ -ಅಂದು ಮಧ್ಯಾಹ್ನದ ತಾಪಮಾನ ೪೩ ಡಿಗ್ರಿ) ಮೊದಲಲ್ಲೇ ಸರಳವಾಗಿ ಪೋಲಿಸರ ತಡೆ ಬಂತು. ಪ. ಬಂಗಾಳದಲ್ಲಿ ಆ ಕಾಲದಲ್ಲೇ ಸಹವಾರರಿಗೂ ಶಿರಸ್ತ್ರಾಣ ಕಡ್ಡಾಯವಿತ್ತು, ನಾವು ಒಯ್ದೇ ಇರಲಿಲ್ಲ. ನಮ್ಮ ಅಜ್ಞಾನವನ್ನು ಪೊಲಿಸರು ಮನ್ನಿಸಿದರು.ಮತ್ತೆ ನಿರ್ವಿಘ್ನವಾಗಿ…. ಗಂಗಾ ಬ್ರಹ್ಮಪುತ್ರ ನದಿಗಳ ಮುಖಜಭೂಮಿಯ ಸಾವಿರಾರು ಕುದುರುಗಳಲ್ಲಿ ವ್ಯಾಪಿಸಿರುವ ‘ಸುಂದರಬನ್ಸ್ ವ್ಯಾಘ್ರಧಾಮ’ದಂತದ್ದು ಜಗತ್ತಿನಲ್ಲೇ ಇನ್ನೊಂದಿಲ್ಲ. ಅದನ್ನು ನೋಡುವುದರಿಂದಲೇ ನಮ್ಮ ಎರಡನೇ ಭಾರತ ಸಾಹಸಯಾನವನ್ನು ಪ್ರಾರಂಭಿಸುವ ಯೋಜನೆ ನನ್ನದಿತ್ತು. ಅದಕ್ಕನುಕೂಲವಾಗುವಂತೆ ಕಲ್ಕತ್ತಾ ವಾಸ/ ದರ್ಶನವನ್ನು ಸ್ವಲ್ಪ ಹೆಚ್ಚೇ ಮಾಡಲು ನಮಗೆ ಒಳ್ಳೆಯ ಅವಕಾಶ ಒದಗಿಸಿದವರು ಸ್ವಾಮೀ ಜಗದಾತ್ಮಾನಂದ (೧೯೨೯-೨೦೧೮). ರಾಮಕೃಷ್ಣಾಶ್ರಮದ ಬಹು ಗೌರವಾನ್ವಿತ ಸಂನ್ಯಾಸಿಗಳಲ್ಲಿ ಜಗದಾತ್ಮಾನಂದರದು ದೊಡ್ಡ ಹೆಸರು. ಅಪ್ಪಟ ಕನ್ನಡಿಗರೇ ಆದ ಸ್ವಾಮೀಜೀ ತನ್ನ ಓದು, ಅಧ್ಯಯನ ಹಾಗೂ ಸಮಾಜಸೇವೆಗಳ ಅನುಭವಗಳನ್ನು ಕ್ರೋಢೀಕರಿಸಿ ಬರೆದ ‘ಬದುಕಲು ಕಲಿಯಿರಿ’ (೨ ಭಾಗಗಳು) ಪುಸ್ತಕವಂತೂ ಕನ್ನಡ ಪ್ರಕಾಶನರಂಗದಲ್ಲಿ ಅದ್ವಿತೀಯ ದಾಖಲೆಯನ್ನೇ ಮಾಡಿದೆ.

read more
ಅನನುಭವ ಎಡವಿತು, ಛಲ ಸಾಧಿಸಿತು!

ಅನನುಭವ ಎಡವಿತು, ಛಲ ಸಾಧಿಸಿತು!

(ಪರ್ವತಾರೋಹಣ ಸಪ್ತಾಹದ ಆರನೇ ಅಧ್ಯಾಯ) ದ.ಕ ಜಿಲ್ಲೆಯಲ್ಲಿ ಎರಡು ಮಹಾಬಂಡೆ ಗುಡ್ಡೆಗಳಿವೆ. ಅತ್ಯುನ್ನತಿ ಮತ್ತು...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

  5. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

127 ಗಂಟೆಗಳು!

127 ಗಂಟೆಗಳು!

ಪರ್ವತಾರೋಹಿ ಸಾಹಸಿಯೊಬ್ಬ ಏಕಾಂಗಿಯಾಗಿ ವಿರಳ ಜನಸಂಚಾರ ವಲಯದ ಭಾರೀ ಪ್ರಾಕೃತಿಕ ಕೊರಕಲುಗಳ ಶೋಧಕ್ಕೆ ಹೋಗುತ್ತಾನೆ....

read more