ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’
ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ…) ಗಹನತೆ ಅಡಿ, ಮೀಟರ್ಗಳಲ್ಲಿ ಹೇಳಿದರೆ ಮುಟ್ಟುವುದಿಲ್ಲ. ಅವರಿಗೆ ನಿತ್ಯ ಕಾಣುವ ಬಲ್ಲೇರಿ, ಕಳಂಜಿಮಲೆ, ಬಿರುಮಲೆ, ಬಂಟಮಲೆಗಳೇ ನಿಜದ ಅಳತೆಗೋಲು. ನಾನು ಅವನ್ನೂ ಅನುಭವಿಸುವ ಸರಣಿಯಲ್ಲಿ, ಒಂದು ಮಳೆ ದಿನದ ಬೆಳಿಗ್ಗೆ ಬಂಟಮಲೆ ಆಯ್ದುಕೊಂಡಿದ್ದೆ. ತಂಡ ನಾಲ್ಕು ಬೈಕೇರಿ, ಪಂಜ ತಲಪಿತ್ತು. ಮತ್ತೆ ಅಲ್ಲಿ ಇಲ್ಲಿ ವಿಚಾರಿಸುತ್ತ ಸುಮಾರು ಹನ್ನೊಂದು ಕಿಮೀ ಕಳೆದು, ಬಿಳಿಮಲೆಯಲ್ಲಿದ್ದ ಪುರುಷೋತ್ತಮರ ಮನೆ ಸೇರಿದ್ದು ಒಂದು ಆಕಸ್ಮಿಕ. ಪುರುಷೋತ್ತಮರು ಆ ದಿನಗಳಲ್ಲಿ ಮಂಗಳೂರು ವಿವಿ ನಿಲಯದಲ್ಲಿದ್ದರು (೧೯೮೭). ಹಾಗಾಗಿ ಅವರು ನಮಗೆ ಮನೆಯಲ್ಲಿ ಸಿಗಲಿಲ್ಲ. ನಾವು ಬೈಕು, ಜಿಗಣೆಗೆ ಬೆದರಿದ ಅಭಯ, ಜತೆಗೆ ದೇವಕಿಯನ್ನು ಪುರುಷೋತ್ತಮರ ತಾಯಿಗೊಪ್ಪಿಸಿ, ಕಾಡು ನುಗ್ಗಿದ್ದೆವು. ಸುಮಾರು ಎರಡು ಗಂಟೆಯ ಅವಧಿಯಲ್ಲಿ, ಶಿಖರ ವಲಯವನ್ನು ತಲಪಿ ಸುತ್ತಾಡಿ, ಬುತ್ತಿಯೂಟ ಮಾಡಿ ಮುಗಿಸಿದ್ದೆವು. ಅನಂತರ ಉತ್ಸಾಹದಲ್ಲಿ ಇಳಿಯುತ್ತ ಮಳೆ, ಮಂಜು, ಹುಲ್ಲು, ಪೊದರುಗಳ ಫಿತೂರಿಯಲ್ಲಿ ದಿಕ್ಕು ತಪ್ಪಿ ತಲಪಿದ್ದು ಎದುರು ಮೈಯ ಏರಿಮಲೆ, ಗುತ್ತಿಗಾರು. ಮತ್ತೆ ಬಾಡಿಗೆ ವಾಹನ ಹಿಡಿದು ಪಂಜಕ್ಕಾಗಿ ಬಿಳಿಮಲೆ ಸೇರಿ, ಮರಳಿದ ಪ್ರಕರಣ ಸುಖಾಂತ ಸಾಹಸವೇ ಅನ್ನಿಸಿತ್ತು.
ಕೊಲಂಬಸ್ ಏರಿಕಲ್ಲನ್ನು ಕಂಡ!
(ಪರ್ವತಾರೋಹಣ ಸಪ್ತಾಹದ ಎರಡನೇ ಭಾಗ) ಪರ್ವತಾರೋಹಣ ಸಪ್ತಾಹದ ಮೊದಲ ದಿನದ ಸಭಾ ಕಲಾಪಕ್ಕೆ, ಅಂದರೆ ಸಂತ ಅಲೋಶಿಯಸ್...
ಪ್ರಕೃತಿಯ ಮಡಿಲಲ್ಲಿ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ – ೮ ನನ್ನ ಪತ್ರಲೇಖನ ಹವ್ಯಾಸ...
ಆರೋಹಣದ ಹುಟ್ಟು ಮತ್ತು ಪರ್ವತಾರೋಹಣ ಸಪ್ತಾಹ
(ಧಾರಾವಾಹಿಯ ಮೊದಲ ಭಾಗ) ಮೂವತ್ತಾರು ವರ್ಷಗಳ ಹಿಂದೆ, ದಕ ಜಿಲ್ಲೆ ಮಿತಿಯೊಳಗೆ ಹೀಗೊಂದು ಕಲಾಪ ನಡೆಸಿದ್ದೆವು ಗೊತ್ತೇ?...
ಕತ್ತಲಿನಿಂದ ಬೆಳಕಿನೆಡೆಗೆ
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಅಧ್ಯಾಯ – ೭ ನಮ್ಮ ಮುತ್ತಜ್ಜನ ಮಕ್ಕಳಲ್ಲಿ ರಾವ್...
ಇಲಾಖೆ ಊರಿಗೆಳೆದರೆ ಸನ್ಯಾಸಿ ಕಾಡಿಗೆಳೆದರು!
(ತೀರ್ಥಯಾತ್ರೆ ಭಾಗ ಮೂರು) [ನಾನೊಂದು ಎಣಿಸಿದರೆ ಗಣಕವಿನ್ನೊಂದೇ ಫಿತೂರಿಸಿತು! ಕಳೆದ ಆದಿತ್ಯವಾರ ಸಂಜೆ ಇನ್ನೇನು...
ಅಪ್ಪಟ ಜವಳಿ, ಹೊಳೆಯುವ ರತ್ನ
ತೀರ್ಥಯಾತ್ರೆ (ಭಾಗ ಎರಡು) ಶಿಕಾರಿ’ ಅಭಯನ ನಿರ್ದೇಶನದಲ್ಲಿ ತಯಾರಾಗುತ್ತಿರುವ ಎರಡು-ಮೂರನೇ ಚಿತ್ರ! (ಹೌದು, ಇದು...
ಅಜ್ಜಿಯೋ ಅಮ್ಮನೋ!
ಹೌದು, ಇಂದು ಸಂಜೆ ಏಳು ಗಂಟೆಗೆ ತೀರಿಹೋದ (ಪ್ರಾಯ ತೊಂಬತ್ತೊಂದು) ಸಂಬಂಧದಲ್ಲಿ ನನ್ನ ಚಿಕ್ಕಜ್ಜಿ (ತಂದೆಯ ಚಿಕ್ಕಪ್ಪ,...
ದಾರಿ ತಪ್ಪಿದ ದಾರಿ
(ತೀರ್ಥ ಯಾತ್ರೆ ಭಾಗ ೧) ನಾನು ಗೆಳೆಯರೊಡನೆ ವನ್ಯ ರಕ್ಷಣೆ ಬಗ್ಗೆ ಭಯಂಗರ ಮಾತಾಡುತ್ತಾ ಚೂರುಪಾರು ಕೆಲಸ ಮಾಡುತ್ತಾ...
ಮೊದಲಿಗೆ ಹಡಗಿನಲ್ಲಿ ಹೋದ ಕನ್ನಡದ ರಾಗಗಳು
[ಮಂಗಳೂರಿನ ಯಾವುದೋ ಇಲಾಖಾ ಕಛೇರಿಯಲ್ಲಿ ಐವತ್ತು ವರ್ಷಕ್ಕೂ ಮಿಕ್ಕ ಭೂದಾಖಲೆಗಳು ಅಟ್ಟಿಬಿದ್ದಿದ್ದವಂತೆ. ಹವಾಮಾನ...
ವನ್ಯಜೀವಿ ಸಪ್ತಾಹಕ್ಕೆರಡು ಅಮೋಘ ಕೊಡುಗೆಗಳು
ದಿಟದ ನಾಗರಕ್ಕೆ ಮಣಿಯಿರೋ ನನ್ನ ಹವ್ಯಾಸೀ ವಾಸನೆಗಳು ನನ್ನ ವೃತ್ತಿರಂಗಕ್ಕೂ (ಪುಸ್ತಕ ವ್ಯಾಪಾರ) ದಟ್ಟವಾಗಿ...
ಬ್ಯಾಂಕ್ ಬ್ಯಾಂಕ್ ಭ್ಯಾಂಘ್!
ತಿಂಗಳ ಹಿಂದೆ ಗೆಳೆಯ ಸುಂದರ ರಾವ್ ರಿಸರ್ವ್ ಬ್ಯಾಂಕ್ ಅಧಿಕೃತತೆ ಸಾರುವ ಪರಿಪತ್ರವೊಂದರ ಇ-ಪ್ರತಿಯನ್ನು (ಲಗತ್ತು)...
ಮಹಾಲಿಂಗರು ಕಂಡ ಸಂಜೀವರ ಸಾಹಸ
ಚಿಕ್ಕಾಸಿನ ಕೂಲಿಗೆ ಯಾರ್ಯಾರದೋ ಕಾರು...
ನಾನ್ಯಾಕೆ ಚೀಲ ಕೊಡುತ್ತಿಲ್ಲ?
‘ಕ್ಷಮಿಸಿ, ನಾವು ಚೀಲ ಕೊಡುವುದಿಲ್ಲ. ಪರಿಸರದ ಉಳಿವಿಗಾಗಿ ಪ್ಲ್ಯಾಸ್ಟಿಕ್ ಬೇಡ ಎನ್ನಿ. ಕಾಡಿನ ರಕ್ಷಣೆಗಾಗಿ ಕಾಗದ...
ಅತ್ರಿ – ಪುಸ್ತಕ ಪ್ರಕಾಶನವನ್ನು ಮುಚ್ಚಿದೆ!
ಸಾಮಾಜಿಕ ಋಣಸಂದಾಯ: ೧೯೭೫ರಲ್ಲಿ ನಾನು ಸ್ವತಂತ್ರವಾಗಿ ಪುಸ್ತಕ ಬಿಡಿ ಮಾರಾಟಗಾರನಾಗಿ ಮಂಗಳೂರಿನಲ್ಲಿ...
ಏರಿದವನಿಳಿಯಲೇಬೇಕು
ರಂಗನಾಥ ವಿಜಯ ಭಾಗ ಏಳು ಮಾನವ ಚಂದ್ರನ ಮೇಲಿಟ್ಟ ಮೊದಲ ಹೆಜ್ಜೆ ಮನುಕುಲಕ್ಕೆ ಏನೇ ಇರಲಿ, ಆರ್ಮ್ ಸ್ಟ್ರಾಂಗ್ ಎನ್ನುವ...
ಆಕಾಶ ಪಾತಾಳಗಳ ನಡುವೆ
ರಂಗನಾಥ ವಿಜಯ ಭಾಗ ಆರು [ಕಳೆದ ಕಂತಿನ ಕೊನೆಯಲ್ಲಿ ಇಷ್ಟು ಹತ್ತಿರವಾದರೂ ಅಷ್ಟು ದೂರ (ತದ್ದೂರೇ ತದಂತಿಕೇ ಎಂದೇನೋ...
















Hi, I'm interested in learning more about your service. Please send details. (ref:dnh7hghrxvzui44q)