ದಿಲ್ಲಿಯಿಂದ ಡೆಹ್ರಾಡೂನಿಗೆ…
ದಿಲ್ಲಿ ದಾಳಿಗೆ (೯-೫-೯೦) ಬೆಳಿಗ್ಗೆ ಆರಕ್ಕೆ ನಾಂದಿಯೇನೋ ಹಾಡಿದೆವು. ಆದರೆ ನನ್ನ ಚಕ್ರವೊಂದು ನಿಟ್ಟುಸಿರು ಬಿಟ್ಟು, ಒಂದು ಗಂಟೆ ತಡವಾಗಿ ಮುಂದುವರಿದೆವು. ಆ ದಾರಿ ಖ್ಯಾತ ಪ್ರವಾಸೀ ತ್ರಿಕೋನದ ಬಲ ಭುಜ, ವಾಸ್ತವದಲ್ಲೂ ಬಹುತೇಕ ಸರಳ ರೇಖೆಯಂತೇ ಇದೆ. ಗಗನಗಾಮೀ ನಕ್ಷಾ ನೋಟದಲ್ಲಿ ಮಾತ್ರ ಉದ್ದಕ್ಕೂ ಯಮುನಾ ನದಿ ದೀರ್ಘ ಬಳಕುಗಳ ಸಾಂಗತ್ಯ ಕೊಡುತ್ತದೆ. ಮಾರ್ಗದ ಕಠೋರ ತಪೋನಿಷ್ಠೆಯನ್ನು ಮುರಿಯ ಬಂದ ಅಪ್ಸರೆಯಂತೆ ನಲಿದಿದೆ. ದಾರಿಗೆ ಈ ಅಲೌಕಿಕ ದೃಶ್ಯ ಅಗೋಚರವಾದ್ದರಿಂದ ಸುಮಾರು ಇನ್ನೂರು ಕಿಮೀ ಉದ್ದದ್ದ ದಿಲ್ಲಿಯ ಜಪವನ್ನೇ ನಾವು ಮಾಡಿಕೊಂಡಿದ್ದೆವು. ಸುಮಾರು ಮಧ್ಯಂತರದಲ್ಲಿದ್ದ ಏಕೈಕ ಬದಲಾವಣೆ ಮಥುರಾ. ಪುರಾಣ, ಇತಿಹಾಸಗಳಿಗೆ ಇಂದೂ ಈ ನೆಲದಲ್ಲಿ ಸಾಕಷ್ಟು ಪುರಾವೆಗಳು ಇವೆ. ಅವನ್ನು ವೈಚಾರಿಕವಾಗಿ ಗುರುತಿಸಿಕೊಳ್ಳುವ ಸಂತೋಷವೇ ನಿಜ ಸಂಸ್ಕೃತಿ. ಅದು ಬಿಟ್ಟು, ಅವನ್ನು ಯಾವುದೋ ಒಂದು ಕಾಲಘಟ್ಟಕ್ಕೆ ಸೀಮಿತಗೊಳಿಸಿ, ಇತಿಹಾಸವನ್ನು ತಿದ್ದುವ ಪ್ರಯತ್ನ ಮಾಡುವುದು ವಿಕೃತಿ. ನಮ್ಮೀ ಬೈಕ್ ಯಾನದಲ್ಲಿ ಬಾದಾಮಿಯಿಂದ ಆಗ್ರಾದವರೆಗಿನ ಐತಿಹಾಸಿಕ ರಚನೆಗಳಲ್ಲಿ ಹೆಚ್ಚಾಗಿ ಮೆರೆಯುವುದು – ವಿವಿಧ ಕಾಲಗಳ ವೈಯಕ್ತಿಕ ಮಹತ್ವಾಕಾಂಕ್ಷೆ ಮಾತ್ರ. ಅವರಲ್ಲಿ ಹೆಚ್ಚಿನವರಿಗೆ ಖಾಯಂ ಯಾವ ಮತಧರ್ಮದ ಸೋಂಕೂ ಇಲ್ಲ, ಜನಾಂಗ ಭಾಷೆಗಳ ದುರಭಿಮಾನವೂ ಇಲ್ಲ. ಇವನ್ನು ಗ್ರಹಿಸುವಲ್ಲಿ ಎಲ್ಲ ಕಾಲದಲ್ಲೂ ಇದ್ದಂತೆ ದೊಡ್ಡ ಅಡ್ಡಿ ವಿಚಾರಹೀನ ಆರಾಧಕರು ಮತ್ತು ಅವರನ್ನು ಸ್ವಾರ್ಥ ಸಾಧನೆಗಾಗಿ ಬಳಸಿಕೊಳ್ಳುವ ರಾಜಕಾರಣಿಗಳು.
ದಿಕ್ಕೆಲ್ ಕಲ್ಲಿಗೆ ಲಗ್ಗೆ
(ಮೂರು ಭಾಗಗಳ ಸಾಹಸ ಕಥನ – ಅಸಾಧ್ಯ ಅಮೆದಿಕ್ಕೆಲ್ಲಿನ ಅಂತಿಮ ಭಾಗ) ನನ್ನ ಚಾರಣಗಳು ಹಳ್ಳಿ, ಕುಗ್ರಾಮಗಳನ್ನು ದಾಟಿಯೇ...
ಹರಿವುದೆನ್ನ ಮನವು ಹಿಂದೆ…..
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಇದರ ಅಧ್ಯಾಯ – ೫ ರಾಜ್ಯ ಹೆದ್ದಾರಿಗಳಿನ್ನೂ...
ಚಾರ್ಮಾಡಿಯಿಂದ ಶಿರಾಡಿಗೆ
ಅಸಾಧ್ಯ ಅಮೆದಿಕ್ಕೆಲ್ ಸಾಹಸ ಕಥನಮಾಲಿಕೆಯಲ್ಲಿ ಎರಡನೇ - ಭಾಗ ಆರೋಹಣದ ಮಿತ್ರ ಬಳಗದಲ್ಲಿ ಆನೆಗಾವಲಿನ...
ಆ ಕಾಲವೊಂದಿತ್ತು…….
ಶ್ಯಾಮಲಾ ಮಾಧವ ಇವರ ಆತ್ಮಕಥಾನಕ ಧಾರಾವಾಹಿ `ನಾಳೆ ಇನ್ನೂ ಕಾದಿದೆ’ ಇದರ ಅಧ್ಯಾಯ – ೪ ಶಾಲಾ ಮಕ್ಕಳ ಆಟಕ್ಕೆಂದು...
ಬ್ಯಾಂಕ್ ಬ್ಯಾಂಕ್ ಭ್ಯಾಂಘ್!
ತಿಂಗಳ ಹಿಂದೆ ಗೆಳೆಯ ಸುಂದರ ರಾವ್ ರಿಸರ್ವ್ ಬ್ಯಾಂಕ್ ಅಧಿಕೃತತೆ ಸಾರುವ ಪರಿಪತ್ರವೊಂದರ ಇ-ಪ್ರತಿಯನ್ನು (ಲಗತ್ತು)...
ಮಹಾಲಿಂಗರು ಕಂಡ ಸಂಜೀವರ ಸಾಹಸ
ಚಿಕ್ಕಾಸಿನ ಕೂಲಿಗೆ ಯಾರ್ಯಾರದೋ ಕಾರು...
ನಾನ್ಯಾಕೆ ಚೀಲ ಕೊಡುತ್ತಿಲ್ಲ?
‘ಕ್ಷಮಿಸಿ, ನಾವು ಚೀಲ ಕೊಡುವುದಿಲ್ಲ. ಪರಿಸರದ ಉಳಿವಿಗಾಗಿ ಪ್ಲ್ಯಾಸ್ಟಿಕ್ ಬೇಡ ಎನ್ನಿ. ಕಾಡಿನ ರಕ್ಷಣೆಗಾಗಿ ಕಾಗದ...
ಅತ್ರಿ – ಪುಸ್ತಕ ಪ್ರಕಾಶನವನ್ನು ಮುಚ್ಚಿದೆ!
ಸಾಮಾಜಿಕ ಋಣಸಂದಾಯ: ೧೯೭೫ರಲ್ಲಿ ನಾನು ಸ್ವತಂತ್ರವಾಗಿ ಪುಸ್ತಕ ಬಿಡಿ ಮಾರಾಟಗಾರನಾಗಿ ಮಂಗಳೂರಿನಲ್ಲಿ...
ಏರಿದವನಿಳಿಯಲೇಬೇಕು
ರಂಗನಾಥ ವಿಜಯ ಭಾಗ ಏಳು ಮಾನವ ಚಂದ್ರನ ಮೇಲಿಟ್ಟ ಮೊದಲ ಹೆಜ್ಜೆ ಮನುಕುಲಕ್ಕೆ ಏನೇ ಇರಲಿ, ಆರ್ಮ್ ಸ್ಟ್ರಾಂಗ್ ಎನ್ನುವ...
ಆಕಾಶ ಪಾತಾಳಗಳ ನಡುವೆ
ರಂಗನಾಥ ವಿಜಯ ಭಾಗ ಆರು [ಕಳೆದ ಕಂತಿನ ಕೊನೆಯಲ್ಲಿ ಇಷ್ಟು ಹತ್ತಿರವಾದರೂ ಅಷ್ಟು ದೂರ (ತದ್ದೂರೇ ತದಂತಿಕೇ ಎಂದೇನೋ...
ಸಂದುಗೊಂದಿನಲ್ಲಿ ಉನ್ನತ ಚಿಂತನ
ರಂಗನಾಥ ವಿಜಯ - ಭಾಗ ಐದು “ಸುರುಳಿ ಸುತ್ತಿದ ಹಗ್ಗ ಬಿಡಿಸಿ, ಒಂದು ತುದಿಯನ್ನು ತನ್ನ ಸೊಂಟಕ್ಕೆ ಬಿಗಿದುಕೊಂಡು ಅಶೋಕರು...
ರಂಗನಂಘ್ರಿಗೆ ಮಣಿದೂ…
ರಂಗನಾಥ ಸ್ತಂಭ ವಿಜಯ - ಭಾಗ ನಾಲ್ಕು ಬಂಡೆ ಬೊಬ್ಬಿಟ್ಟಿತು, ಕಾಡು ಚೀರಿತು, ತಂಡದವರಂತೂ “ಅಶೋಕ್ ಹೇಗಿದ್ದೀರಿ?...
ಮಹಾಲಿಂಗ ಭಟ್ಟರ ಅಂಕಣದಿಂದ
ಪ್ರಜಾವಾಣಿಯ ಶನಿವಾರದ ಕರಾವಳಿ ಪುರವಣಿಯಲ್ಲಿ ಗೆಳೆಯ ಮಹಾಲಿಂಗ ಭಟ್ಟರು ಕೆಲವು ಸಮಯದಿಂದ ಒಂದು ಅಂಕಣ ನಡೆಸುತ್ತಾ ಇಲ್ಲ!...
ಇಷ್ಟಸಿದ್ಧಿ ಹೋಮಂ ಕರಿಷ್ಯೇ
ರಂಗನಾಥ ಸ್ತಂಭ ವಿಜಯ ಭಾಗ ಮೂರು ಚಳಿಗೆ ಕಾಲವೂ ನಡುಗುವುದು: ಶ್ರೀರಂಗನಾಥ ಸ್ವಾಮಿಯು ಆದಿಶೇಷನ ಮೇಲೆ ಒರಗಿ, ಒಂದೆಸಳು...
ಹೂಡಿದೆವು ಶಿಬಿರ – ರಂಗನಾಥ ಸ್ತಂಭ ವಿಜಯ ಭಾಗ ಎರಡು
ಗಣಪತಿಭಟ್ಟರ ಸ್ವಗತ: “ಊಟಿಗೆ ಬರ್ತೀರಾ” ಅದೊಂದು ದಿನ ಹೀಗೇನೋ ಅಶೋಕರು ಕೇಳಿದರು. ಊಟಿಯ ಆಕರ್ಷಣೆಯಲ್ಲಿ ವಿಳಂಬಿಸದೆ...
ಯಕ್ಷಗಾನ ವಿಮರ್ಶೆಗಾಗಿ ದಾಕ್ಷಿಣ್ಯಬಿಟ್ಟವರು
“ಪ್ರದರ್ಶನದಲ್ಲಿ ಏನಾದರೂ ಹುರುಳುಂಟೇ ಅಥವಾ ಇದು ಕೇವಲ ನನ್ನೊಬ್ಬನ ಹಳವಂಡವೋ?” ಇದು ತನ್ನ ದೀವಟಿಗೆ ಪ್ರದರ್ಶನದ...
















ವಾಹ್! ಅಪರೂಪಂ ಚೋರ, ಅಲ್ಲಲ್ಲ ಮಿತ್ರ ದರ್ಶನಂ 🙂