ಸೀಳೋಟದ ಕೊನೆಗೊಂದು ಸೀಳು ನೋಟ

ಸೀಳೋಟದ ಕೊನೆಗೊಂದು ಸೀಳು ನೋಟ

ಪ್ರಾಕೃತಿಕ ಭಾರತದ ಸೀಳೋಟ ಯೋಜನೆಯಲ್ಲಿ ಆರಂಭದ ೨೫-೪-೯೦ ಮತ್ತು ಕೊನೆಯ ೨೭-೫-೯೦ ದಿನಾಂಕಗಳನ್ನು ಖಚಿತವಾಗಿಯೇ ನಿಶ್ಚೈಸಿದ್ದೆ. ಕಾರಣ ಸರಳ – ಹುಬ್ಬಳ್ಳಿ, ಭೋಪಾಲ ಮುಂತಾದ ಸ್ಥಳಗಳಲ್ಲಿ ನಮ್ಮನ್ನು ಕಾದು ಕುಳಿತವರನ್ನು ನಿಗದಿತ ದಿನಕ್ಕೆ ಮುಟ್ಟದೇ ಅಗೌರವಿಸಬಾರದು. ಮತ್ತು ಮಂಗಳೂರಿಗೆ ಮರಳಲು ರೈಲ್ವೇ ಕಾಯ್ದಿರಿಸುವಿಕೆ ವ್ಯರ್ಥವಾಗಬಾರದು. ಹಾಗೆ ಲಭ್ಯ ಮೂವತ್ಮೂರು ದಿನಗಳಲ್ಲಿ, ಬೈಕ್ ಯಾನ ಮತ್ತು ಸ್ಥಳ ಸಂದರ್ಶನದ ದಿನಗಳು ಮೂವತ್ತು ಮಾತ್ರ. ಹೆಚ್ಚುವರಿ ಮೂರು ದಿನಗಳನ್ನು ಮಾರ್ಗಕ್ರಮಣದ ಆಕಸ್ಮಿಕಗಳ ಹೊಂದಾಣಿಕೆಗೂ ದಿಲ್ಲಿ ದರ್ಶನಕ್ಕೂ ಮೀಸಲಿರಿಸಿದ್ದೆವು. ೨೪ರ ಅಪರಾಹ್ನವೇ ದಿಲ್ಲಿ ಸೇರಿದ್ದ ನಮಗೆ ವಿನಿಯೋಗಕ್ಕೆ ಸ್ಪಷ್ಟ ಮೂರು ದಿನಗಳು ಉಳಿದಿದ್ದವು. ಹನ್ನೊಂದು ದಿನಗಳ ಹಿಂದೆ ಬಾರದ ಅನೇಕ ಹೃದ್ಯವಾಗುವಂತ ಪತ್ರಗಳ ಪಠಣ ಪ್ರಥಮಾದ್ಯತೆಯ ಖುಷಿ. ಅನಂತರ ತಂದೆಗೆ “ಎಲ್ಲ ಸೌಖ್ಯ. ಬಾಕಿ ಸಂಗ್ತಿ ಮೊಖ್ತಾ” ಎಂದಷ್ಟೇ ತಿಳಿಸುವ ನನ್ನೆಲ್ಲ ಒದ್ದಾಟಗಳನ್ನು ಎಸ್ಟೀಡೀ ಭೂತಗಳು ಯಶಸ್ವಿಗೊಳಿಸಲೇ ಇಲ್ಲ. ಕರ್ನಾಟಕ ಸಂಘದ ಅಟೆಂಡರ್ – ಗೌಡ, ತಲಾ ರೂ ಮೂವತ್ತೈದರಂತೆ ದಿಲ್ಲಿ ದರ್ಶನ ಮಾಡಿಸುತ್ತೇನೆಂದ. ಒಪ್ಪಿ ಬಸ್ಸೇರಿದೆವು.

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE