ಜೈಪುರಕ್ಕೆ ಜೈ ಆಗ್ರಾವೂ ಸೈ

ಜೈಪುರಕ್ಕೆ ಜೈ ಆಗ್ರಾವೂ ಸೈ

‘ಹೊಟ್ಟೆ ಘಟ್ಟಿಯಿರಬೇಕು, ಘಟ್ಟ ಎದುರಾಗಬೇಕು’ ಸಾಹಸ ಯಾತ್ರೆಗಳಲ್ಲಿ ನನ್ನ ಅಭ್ಯಾಸ. ಬೆಳಿಗ್ಗೆ ನಾಲ್ಕು ಗಂಟೆಗೆ ಹೊರಡಬೇಕಾದರೂ ತಿಂಡಿ ಮಾಡಿಕೊಟ್ಟರೆ, ನಾನು ತಿಂದೇ ಹೊರಡುವವ. ಹಾಗೆಂದು ಒಂದೆರಡು ಗಂಟೆ ತಡವಾದರೆ ಕೈಕಾಲೇನು ಬಿದ್ದು ಹೋಗುವುದೂ ಇಲ್ಲ. ಅಂದು (೬-೫-೯೦) ರಣಥೊಂಬರಾ ಕೋಟೆಯನ್ನು ಬೆಳಿಗ್ಗೆ ನೋಡಿ ಬರುವ ಉತ್ಸಾಹದಲ್ಲಿ ತಿಂಡಿ ತಿಂದಿರಲಿಲ್ಲ. ವಾಪಾಸು ಬಂದು ಮುಂದಿನ ಪ್ರಯಾಣಕ್ಕಿಳಿಯುವಾಗ ಮಾತ್ರ (೧೦.೪೫), ಒಂದೆರಡಲ್ಲ ಮೂರ್ನಾಲ್ಕು ಗಂಟೆಗಳೇ ತಡವಾಗಿತ್ತು. ಮೊದಲು ಸಿಕ್ಕ ಧಾಬಾಕ್ಕೇ ನುಗ್ಗಿದೆವು. ಅವನಲ್ಲಿ ಪೂರ್ವ ಸಿದ್ಧತೆಗಳೇನೂ ಇರಲಿಲ್ಲ. ಹಾಗಾಗಿ ನಾವು ಹಳಸಲು ಎಣ್ಣೇಲಿ ಕರಿದ ಪೂರಿ, ಜಿಡ್ಡು ಬಸಿಯುವ ಪರೋಟಾ ಬಿಟ್ಟು, ರೊಟ್ಟಿ, ಮೊಸರು, ಉಪ್ಪಿನ ಕಾಯಿ ಕೇಳಿದೆವು. “ಬನ್ಜಾಯೆಗಾ” (ಮಾಡ್ಕೊಡಾಣಾ) ಎಂದ. ಆದರೆ ಪುಣ್ಯಾತ್ಮ ಮಾಡಿದ್ದು ಅವನದೇ ಕ್ರಮದಲ್ಲಿ. ಹಿಟ್ಟನ್ನು ಕಲೆಸುವಾಗಲೇ ಧಂಡಿಯಾಗಿ ಎಣ್ಣೆ ಸುರಿದುಬಿಟ್ಟ. ಒಂದೊಂದು ಇಂಚು ದಪ್ಪಕ್ಕೆ ಲಟ್ಟಿಸಿ, ಅದೇನು ತವಾವೋ ಚಪ್ಪಟೆ ಬಾಣಲೆಯೋ ಎನ್ನುವಂತೆ ಎಣ್ಣೇ ಸ್ನಾನ ಮಾಡಿಸಿಯೇ ಕೊಟ್ಟ. ಲೇಟ್ ಫೀ ಪೇಡ್ ಬಿರೇಕ್ ಫಾಸ್ಟ್‍ಗೆ, ಅಡ್ವಾನ್ಸ್ಡ್ ಲಂಚೂ ಸೇರಿಸಿ, ಒಬ್ಬೊಬ್ಬರೂ ಕನಿಷ್ಠ ಆರೆಂಟು ರೊಟ್ಟಿಯಾದರೂ ಹೊಡೀಬೇಕು ಅಂದು ಕೊಂಡಿದ್ದೆವು.

read more

Category

Latest Comments

  1. ಮಾನವತೆಯ ದೀಪ ಹಚ್ಚು ಅಂಧಕಾರವು ತೊಲಗಲಿ ಎಂದು ಬರೆದು ನಮ್ಮ ಭಾವ ಬೆಳಗಿದ ಜಿ.ಯಸ್ಸೆಸ್ ಅವರ ಕವಿತೆಯೇ ಜಯದೇವರ ರೂಪದಲ್ಲಿ ಕೃತಿಯಾಗಿ ಬೆಳಗುತ್ತಿರುವಂತೆ ಕಂಡಿತು.❤️

  2. ಜಯದೇವ ಸರ್ ಅವರದು ನಿಜಕ್ಕೂ ಅದ್ಭುತ ಸಾಧನೆ.. 2007ರಿಂದ2010ರ ವರೆಗೆ ನಾನು ಚಾಮರಾಜನಗರ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕನಾಗಿದ್ದಾಗ, ನಬಾರ್ಡ್ ಎಜಿಎಂ ವಿನಯ್ ಅವರ ಜೊತೆ ಆಗಾಗ…

  3. 1990ರ ಆಸುಪಾಸಿನಲ್ಲಿ ನಾನು ಹೈಸ್ಕೂಲ್ ಓದುತ್ತಿದ್ದೆ. ಆಗ ಗೆಳೆಯನೊಬ್ಬನಿಂದಾಗಿ ವಿವೇಕಾನಂದ ಗಿರಿಜನ ಕಲ್ಯಾಣ ಕೇಂದ್ರದ ಪರಿಚಯ ಆಯಿತು. ಇಲ್ಲಿಗೆ ಬಂದು ಶಾಲಾ ಮಕ್ಕಳ ಡಾರ್ಮಿಟರಿ ಯಲ್ಲಿ ಒಂದೆರಡು…