ಲಕ್ಷದ್ವೀಪದತ್ತ ಒಂದು ಲಕ್ಷ್ಯ

ಲಕ್ಷದ್ವೀಪದತ್ತ ಒಂದು ಲಕ್ಷ್ಯ

ಮುಮ್ಮಾತು: ಸಾವಿರ ಕೊಟ್ಟು ಲಕ್ಷ ಗಳಿಸುವ ಯೋಗ ೨೦೧೦ ರ ನನ್ನ ಆರು ಭಾಗಗಳ ಲಕ್ಷದ್ವೀಪ ಪ್ರವಾಸ ಕಥನ ನೀವೆಲ್ಲ ಓದಿದ್ದೀರಿ ಎಂದು ಭಾವಿಸುತ್ತೇನೆ. ಅನಂತರದ ದಿನಗಳಲ್ಲಿ ಗೆಳೆಯ ಅಬ್ದುಲ್ ರಶೀದ್ ಕವರತ್ತಿಯಲ್ಲಿರುವ ಆಕಾಶವಾಣಿಯ ಶಾಖೆಗೆ ವರ್ಗಾವಣೆಗೊಂಡರು. ಅವರ ಚಿತ್ರಗಳು, ಚಲಚಿತ್ರಗಳು ಎಲ್ಲಕ್ಕೂ ಮಿಗಿಲಾಗಿ ಲಕ್ಷದ್ವೀಪ ಡೈರಿಯ ಮುಗಿಯದ ಪುಟಗಳು, ನಮಗೆ ಎಂದೂ ಹಳತಾಗದ, ಕಡಲಲೆಗಳಂತೇ ಹೊಸ ವಿಚಾರಗಳನ್ನು ಮಗುಚುತ್ತಲೇ ಇವೆ. ನನಗೆ ಸಿಕ್ಕ ಈ ಆಪ್ತ ಸರಣಿಯಲ್ಲಿ ಮೂರನೇ ಕಣ್ಣು ತೆರೆಯುತ್ತಿರುವವರು – ಇನ್ನೊಬ್ಬ ಗೆಳೆಯ, ಗಿರೀಶ್. ಇವರದು ಉರಿಗಣ್ಣಲ್ಲ, ಲಕ್ಷದ್ವೀಪಗಳನ್ನಾವರಿಸಿದ ಅರಬೀ ಸಮುದ್ರದ್ದೇ ಇನ್ನೊಂದು (ಪೂರ್ವ) ಮಗ್ಗುಲಿನ ಕರಾವಳಿಯಲ್ಲೇ ಹದಗೊಂಡ ದೃಷ್ಟಿ. ವೃತ್ತಿಯಲ್ಲಿ ಅಗ್ನಿಶಾಮಕರಾಗಿದ್ದು ಮಂಗಳೂರು ವಿಮಾನ ನಿಲ್ದಾಣದಲ್ಲಿದ್ದ ಗಿರೀಶ್ ಈಗ ಲಕ್ಷದ್ವೀಪಕ್ಕೆ ವರ್ಗಾವಣೆಗೊಂಡಿದ್ದಾರೆ. ಇವರು ನನ್ನ ಜಾಲತಾಣದ ಓದುಗರಿಗೆ ಹೊಸಬರೇನಲ್ಲ (ನೋಡಿ: ಡಾರ್ಜಿಲಿಂಗ್ ಜೋಡುಕಥನ ). ಗಿರೀಶ್ ಬಜ್ಪೆಯ ‘ಟೇಬಲ್ ಟಾಪ್’ ನಿಂದ ಅಗಾತ್ತಿಯ ‘ಲಂಬಿಸಿದ ಮೀನಬಾಲ’ಕ್ಕೆ ತನ್ನ ವಿಶಿಷ್ಟ ನೋಟವನ್ನು ಅಳವಡಿಸಿದ್ದಾರೆ.

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…