ಟೆಹ್ರಿ ಅಣೆಕಟ್ಟು, ಕೇದಾರನಾಥ ವಿಜಯ!

ಟೆಹ್ರಿ ಅಣೆಕಟ್ಟು, ಕೇದಾರನಾಥ ವಿಜಯ!

ಭಾರತ ಸೀಳೋಟದ ಯೋಜನೆಯಲ್ಲಿ ನಾವು ಮಂಗಳೂರು ಬಿಡುವಂದು, ಅನ್ಯ ಮೂವರು ಗೆಳೆಯರು ದಿಲ್ಲಿಗೆ ನೇರ ಬಂದು, ತಂಡಕ್ಕೆ ಸೇರಿಕೊಳ್ಳುವುದಾಗಿ ಹೇಳಿದ್ದರು. ಅವರಿಗೆ ನಮ್ಮೊಡನೆ ಚತುರ್ಧಾಮವಾದರೂ ಅನುಭವಿಸುವ ಹುಚ್ಚು ಹತ್ತಿತ್ತು. ಆದರೆ ಆ ತ್ರಿಮೂರ್ತಿಗಳು ನನ್ನ ನಿರೀಕ್ಷೆಯಂತೆ ಭೋಪಾಲಕ್ಕೆ, ಕೊನೆಗೆ ದಿಲ್ಲಿಗೂ ಪತ್ರ ಖಾತ್ರಿ ಕೊಡಲೇ ಇಲ್ಲ. ನಾವು ದಿಲ್ಲಿ ಬಿಡುವವರೆಗೂ ದಿಲ್ಲಿಗೆ ಬಂದಂತೇ ಇರಲಿಲ್ಲ. ದಿಲ್ಲಿಗೆ ಬಂದಿದ್ದ ನನ್ನ ತಂದೆಯ ಪತ್ರದಲ್ಲಿ ಅವರ ಗೊಂದಲಗಳಷ್ಟೇ ತಿಳಿದಿತ್ತು.  ವಾಸ್ತವದಲ್ಲಿ, ನಾವು ದಿಲ್ಲಿ ಬಿಡುವ ದಿನ (೧೧-೫-೯೦), ಆ ಮೂವರು – ಕೆ. ಲಕ್ಷ್ಮೀನಾರಾಯಣ ರೆಡ್ಡಿ (ರೆಡ್ಡಿ) – ಪ್ರಾಧ್ಯಾಪಕ, ಮೋಹನ ಆಚಾರ್ಯ (ಮೋಹನ್) – ಕುಶಲ ಕರ್ಮಿ, ಮತ್ತು ಕಾವೂರು ಪ್ರಸನ್ನ – ಉದ್ಯಮಿ, ಮಂಗಳೂರಿನಲ್ಲಿ ರೈಲೇರಿದ್ದರು! ಆ ಕಾಲದಲ್ಲಿ ಕೊಂಕಣ ರೈಲ್ವೇ ಇರಲಿಲ್ಲ. ಇವರು ಗಾದೆಯ ‘ಕೊಂಕಣ (ಅರಕ್ಕೋಣಂಗಾಗಿ) ಸುತ್ತಿ ಮೈಲಾರಕ್ಕೆ (ದಿಲ್ಲಿಗೆ)’ ಬರುವಾಗ ೧೪-೫-೯೦ರ ರಾತ್ರಿ. ಪೂರ್ವ ಲೆಕ್ಕಾಚಾರದಂತೆ ಅವರಲ್ಲಿಬ್ಬರ ದಿಲ್ಲಿ ಗೆಳೆಯರು, ಮರು ಬೆಳಗ್ಗೆಯೇ (೧೫-೫-೯೦) ಇವರಿಗೆ ತಮ್ಮ ಬೈಕ್ ಒಪ್ಪಿಸಿದರು. ನನ್ನ ದಿನಚರಿಯ ನಕ್ಷೆಯ ಯಥಾ ಪ್ರತಿ ತ್ರಿಮೂರ್ತಿಗಳಲ್ಲಿತ್ತು. ಅದರ ಬಲದಲ್ಲಿ ನಮ್ಮನ್ನು ನೇರ ಗಂಗೋತ್ರಿಯಲ್ಲಿ ಹಿಡಿಯುವ ಉಮೇದಿನಲ್ಲಿ, ಹನ್ನೊಂದು ಗಂಟೆಗೆ ದಿಲ್ಲಿ ಬಿಟ್ಟರು. ಮೋಹನ್ ಒಂಟಿ, ಪ್ರಸನ್ನನ ಬೆಂಬಲಕ್ಕೆ ರೆಡ್ಡಿ.

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಪರಿಸರ ಚಳವಳಿಯ ಸಾಂಸ್ಕೃತಿಕ ಮುಖ

ಪರಿಸರ ಚಳವಳಿಯ ಸಾಂಸ್ಕೃತಿಕ ಮುಖ

“ಪರ್ವತಾರೋಹಣ ವನ್ಯಸಂರಕ್ಷಣೆಗಳ ಬಗ್ಗೆ ಮಾತಾಡಿದ ತೀವ್ರತೆಯಲ್ಲಿ ನೀವು ಯಕ್ಷಗಾನವೋ ಇನ್ನೊಂದು ಕಲಾಪ್ರಕಾರದ ಬಗ್ಗೆಯೋ...

read more