ತಪ್ಪಿದ ಬದರಿ ಮತ್ತು ಮಾರ್ಗ ಕ್ರಮಣ

ತಪ್ಪಿದ ಬದರಿ ಮತ್ತು ಮಾರ್ಗ ಕ್ರಮಣ

ಕೇದಾರ ನಾಥದ ‘ವಿಜಯ’ಕ್ಕೆ ನಾನು ಅನುಭವಿಸಿದ ನೋವು ಹೆಚ್ಚೇ ಆಗಿತ್ತು. ಹಾಗಾಗಿ ಮರುದಿನದ ಬದರೀ ಯಾನದ ಯೋಚನೆಯನ್ನು ನಾನು ಮತ್ತು ದೇವಕಿ ಕೈ ಬಿಟ್ಟೆವು. ಸೋನ್ ಪ್ರಯಾಗಿನಿಂದ ಬದರಿಗೆ ಹೋಗಿ ಮರಳುವಲ್ಲಿ ಕವಲೂರಾಗಿ ಸಿಗುವ ಊರು ಕರ್ಣಪ್ರಯಾಗ್. ಅಲ್ಲಿ ನಮಗೆ ಎರಡು ದಿನದ ವಿಶ್ರಾಂತಿ, ಇತರರು ಬದರೀನಾಥಕ್ಕೆ. (ಇಂದು ದಾರಿಯ ಸಾಧ್ಯತೆಗಳು ತುಂಬ ಬದಲಿವೆ, ಬಿಡಿ.) ತಂಡವಾದರೂ ಸಾಕಷ್ಟು ಸೋತಿದ್ದುದರಿಂದ ಬೆಳಿಗ್ಗೆ (೨೦-೫-೯೦) ಸುಮಾರು ಎಂಟು ಗಂಟೆಯ ಹೊತ್ತಿಗೆ ಎಲ್ಲರು ಒಟ್ಟಾಗಿಯೇ ಸೋನ್ ಪ್ರಯಾಗ್ ಬಿಟ್ಟೆವು. ರುದ್ರಪ್ರಯಾಗದಲ್ಲೊಂದು ಸೈನ್ಯದ ಆಸ್ಪತ್ರೆ ಕಾಣಿಸಿತು. ಅಲ್ಲಿ ವೈದ್ಯರಿನ್ನೂ ಬಂದಿರಲಿಲ್ಲ. ಹಿರಿಯ ಶುಶ್ರೂಷಕ ಸಹೃದಯತೆಯಲ್ಲೇ ನನ್ನ ಪರೀಕ್ಷೆ ಮಾಡಿದರು. ಮತ್ತೆ ತಾನು ಸೈನಿಕ ಆಸ್ಪತ್ರೆಯ ನಿಯಮಾನುಸಾರ ಸಾರ್ವಜನಿಕ ಚಿಕಿತ್ಸೆ ಕೊಡಲಾಗದ್ದಕ್ಕೆ ಮೊದಲು ಕ್ಷಮೆ ಯಾಚಿಸಿದರು. ಅನಂತರ “ಈಗಾಗಲೇ ನಿಮ್ಮಲ್ಲಿ ಇರುವ ನೋವು ಉಪಶಮನಕಾರಕ ನುಂಗಿ ಸುಧಾರಿಸಿಕೊಳ್ಳಿ. ಊರಿಗೆ ಹೋಗಿ ಅವಶ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿ” ಎಂದು ಸಲಹೆಯನ್ನಷ್ಟೇ ಕೊಟ್ಟರು.

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಪರಿಸರ ಚಳವಳಿಯ ಸಾಂಸ್ಕೃತಿಕ ಮುಖ

ಪರಿಸರ ಚಳವಳಿಯ ಸಾಂಸ್ಕೃತಿಕ ಮುಖ

“ಪರ್ವತಾರೋಹಣ ವನ್ಯಸಂರಕ್ಷಣೆಗಳ ಬಗ್ಗೆ ಮಾತಾಡಿದ ತೀವ್ರತೆಯಲ್ಲಿ ನೀವು ಯಕ್ಷಗಾನವೋ ಇನ್ನೊಂದು ಕಲಾಪ್ರಕಾರದ ಬಗ್ಗೆಯೋ...

read more