ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’

ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’

ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ…) ಗಹನತೆ ಅಡಿ, ಮೀಟರ್‍ಗಳಲ್ಲಿ ಹೇಳಿದರೆ ಮುಟ್ಟುವುದಿಲ್ಲ. ಅವರಿಗೆ ನಿತ್ಯ ಕಾಣುವ ಬಲ್ಲೇರಿ, ಕಳಂಜಿಮಲೆ, ಬಿರುಮಲೆ, ಬಂಟಮಲೆಗಳೇ ನಿಜದ ಅಳತೆಗೋಲು. ನಾನು ಅವನ್ನೂ ಅನುಭವಿಸುವ ಸರಣಿಯಲ್ಲಿ, ಒಂದು ಮಳೆ ದಿನದ ಬೆಳಿಗ್ಗೆ ಬಂಟಮಲೆ ಆಯ್ದುಕೊಂಡಿದ್ದೆ. ತಂಡ ನಾಲ್ಕು ಬೈಕೇರಿ, ಪಂಜ ತಲಪಿತ್ತು. ಮತ್ತೆ ಅಲ್ಲಿ ಇಲ್ಲಿ ವಿಚಾರಿಸುತ್ತ ಸುಮಾರು ಹನ್ನೊಂದು ಕಿಮೀ ಕಳೆದು, ಬಿಳಿಮಲೆಯಲ್ಲಿದ್ದ ಪುರುಷೋತ್ತಮರ ಮನೆ ಸೇರಿದ್ದು ಒಂದು ಆಕಸ್ಮಿಕ. ಪುರುಷೋತ್ತಮರು ಆ ದಿನಗಳಲ್ಲಿ ಮಂಗಳೂರು ವಿವಿ ನಿಲಯದಲ್ಲಿದ್ದರು (೧೯೮೭). ಹಾಗಾಗಿ ಅವರು ನಮಗೆ ಮನೆಯಲ್ಲಿ ಸಿಗಲಿಲ್ಲ. ನಾವು ಬೈಕು, ಜಿಗಣೆಗೆ ಬೆದರಿದ ಅಭಯ, ಜತೆಗೆ ದೇವಕಿಯನ್ನು ಪುರುಷೋತ್ತಮರ ತಾಯಿಗೊಪ್ಪಿಸಿ, ಕಾಡು ನುಗ್ಗಿದ್ದೆವು. ಸುಮಾರು ಎರಡು ಗಂಟೆಯ ಅವಧಿಯಲ್ಲಿ, ಶಿಖರ ವಲಯವನ್ನು ತಲಪಿ ಸುತ್ತಾಡಿ, ಬುತ್ತಿಯೂಟ ಮಾಡಿ ಮುಗಿಸಿದ್ದೆವು. ಅನಂತರ ಉತ್ಸಾಹದಲ್ಲಿ ಇಳಿಯುತ್ತ ಮಳೆ, ಮಂಜು, ಹುಲ್ಲು, ಪೊದರುಗಳ ಫಿತೂರಿಯಲ್ಲಿ ದಿಕ್ಕು ತಪ್ಪಿ ತಲಪಿದ್ದು ಎದುರು ಮೈಯ ಏರಿಮಲೆ, ಗುತ್ತಿಗಾರು. ಮತ್ತೆ ಬಾಡಿಗೆ ವಾಹನ ಹಿಡಿದು ಪಂಜಕ್ಕಾಗಿ ಬಿಳಿಮಲೆ ಸೇರಿ, ಮರಳಿದ ಪ್ರಕರಣ ಸುಖಾಂತ ಸಾಹಸವೇ ಅನ್ನಿಸಿತ್ತು.

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ಕರ್ನಾಟಕದ ಶಿಕ್ಷಣ ಸಚಿವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೊಂದು ಬಹಿರಂಗ ಪತ್ರ

ಕರ್ನಾಟಕದ ಶಿಕ್ಷಣ ಸಚಿವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೊಂದು ಬಹಿರಂಗ ಪತ್ರ

ಮಾನ್ಯರೇ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ಸ್ನಾತಕೋತ್ತರ ಪದವೀಧರನಾಗಿ ಹೊರಬಂದರೂ (೧೯೭೪)...

read more