ತೇನ್ ಸಿಂಗ್ ಬಿಳಿಮಲೆ ಮತ್ತು ‘ಕಾಗೆ ಮುಟ್ಟಿದ ನೀರು’
ಬಹುಮಂದಿಗೆ ಪಶ್ಚಿಮ ಘಟ್ಟದ ದಿಗ್ಗಜಗಳ (ಕುದುರೆಮುಖ, ಕುಮಾರ ಪರ್ವತ…) ಗಹನತೆ ಅಡಿ, ಮೀಟರ್ಗಳಲ್ಲಿ ಹೇಳಿದರೆ ಮುಟ್ಟುವುದಿಲ್ಲ. ಅವರಿಗೆ ನಿತ್ಯ ಕಾಣುವ ಬಲ್ಲೇರಿ, ಕಳಂಜಿಮಲೆ, ಬಿರುಮಲೆ, ಬಂಟಮಲೆಗಳೇ ನಿಜದ ಅಳತೆಗೋಲು. ನಾನು ಅವನ್ನೂ ಅನುಭವಿಸುವ ಸರಣಿಯಲ್ಲಿ, ಒಂದು ಮಳೆ ದಿನದ ಬೆಳಿಗ್ಗೆ ಬಂಟಮಲೆ ಆಯ್ದುಕೊಂಡಿದ್ದೆ. ತಂಡ ನಾಲ್ಕು ಬೈಕೇರಿ, ಪಂಜ ತಲಪಿತ್ತು. ಮತ್ತೆ ಅಲ್ಲಿ ಇಲ್ಲಿ ವಿಚಾರಿಸುತ್ತ ಸುಮಾರು ಹನ್ನೊಂದು ಕಿಮೀ ಕಳೆದು, ಬಿಳಿಮಲೆಯಲ್ಲಿದ್ದ ಪುರುಷೋತ್ತಮರ ಮನೆ ಸೇರಿದ್ದು ಒಂದು ಆಕಸ್ಮಿಕ. ಪುರುಷೋತ್ತಮರು ಆ ದಿನಗಳಲ್ಲಿ ಮಂಗಳೂರು ವಿವಿ ನಿಲಯದಲ್ಲಿದ್ದರು (೧೯೮೭). ಹಾಗಾಗಿ ಅವರು ನಮಗೆ ಮನೆಯಲ್ಲಿ ಸಿಗಲಿಲ್ಲ. ನಾವು ಬೈಕು, ಜಿಗಣೆಗೆ ಬೆದರಿದ ಅಭಯ, ಜತೆಗೆ ದೇವಕಿಯನ್ನು ಪುರುಷೋತ್ತಮರ ತಾಯಿಗೊಪ್ಪಿಸಿ, ಕಾಡು ನುಗ್ಗಿದ್ದೆವು. ಸುಮಾರು ಎರಡು ಗಂಟೆಯ ಅವಧಿಯಲ್ಲಿ, ಶಿಖರ ವಲಯವನ್ನು ತಲಪಿ ಸುತ್ತಾಡಿ, ಬುತ್ತಿಯೂಟ ಮಾಡಿ ಮುಗಿಸಿದ್ದೆವು. ಅನಂತರ ಉತ್ಸಾಹದಲ್ಲಿ ಇಳಿಯುತ್ತ ಮಳೆ, ಮಂಜು, ಹುಲ್ಲು, ಪೊದರುಗಳ ಫಿತೂರಿಯಲ್ಲಿ ದಿಕ್ಕು ತಪ್ಪಿ ತಲಪಿದ್ದು ಎದುರು ಮೈಯ ಏರಿಮಲೆ, ಗುತ್ತಿಗಾರು. ಮತ್ತೆ ಬಾಡಿಗೆ ವಾಹನ ಹಿಡಿದು ಪಂಜಕ್ಕಾಗಿ ಬಿಳಿಮಲೆ ಸೇರಿ, ಮರಳಿದ ಪ್ರಕರಣ ಸುಖಾಂತ ಸಾಹಸವೇ ಅನ್ನಿಸಿತ್ತು.
ಜಿಟಿನಾರಾಯಣ ರಾವ್ ಹಿನ್ನುಡಿ
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹತ್ತೊಂಬತ್ತನೇ ಅಧ್ಯಾಯ [ಅತ್ರಿ ಬುಕ್ ಸೆಂಟರಿನ ಪ್ರಕಾಶನ ವಿಭಾಗದೆಲ್ಲ...
ಒಂಟಿತನ ಶಾಪವಲ್ಲ
ಬಿ.ಎಂ ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ ಅಧ್ಯಾಯ ೩೯ \ನಡೆದು ಬಂದ ದಾರಿಯ ಕಡೆಗೊಮ್ಮೆ ದೃಷ್ಟಿ...
ಪುಸ್ತಕೋದ್ಯಮದ ಸಾಮಯಿಕ ಟಿಪ್ಪಣಿಗಳು
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿನೆಂಟನೇ ಅಧ್ಯಾಯ [ಮೂಲದಲ್ಲಿ ರಸಪ್ರಸಂಗಗಳಿಗೆ ಜತೆಗೊಟ್ಟ, ಪುಸ್ತಕ...
ಅಮ್ಮನೆಂಬೋ ಪ್ರೀತಿಯ ಕಡಲು
ಬಿ.ಎಂ ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ ಅಧ್ಯಾಯ ೩೮ `ತಾಯೊಲವೆ ತಾಯೊಲವು ಈ ಲೋಕದೊಳಗೆ ಕಡಲಿಂಗೆ...
ಸಾಹಸೀ ಸುಂದರ ಅನುಭವ
ನೆಲ್ಲಿತಟ್ಟುತೀರ್ಥ ಘಟ್ಟ ಕೊರೆಯುವ ಆವೇಶ ಕಳಚಿದ pious-ವಿನಿ ಇಲ್ಲಿ ಆದೂರು ವಲಯದ ದಟ್ಟಾರಣ್ಯ ಪೊರೆವ ಮಂದಗಾಮಿನಿ....
ಜಾಂಬ್ರಿ – ಕೆದಕಿದ ಕಣಜದ ಗೂಡು
ಎಪ್ಪತ್ತನೇ ದಶಕದ ಕೊನೆಯ ಭಾಗ ಹೀಗೇ ಒಂದು ದಿನ ಮುಚ್ಚೂರು ಬಳಿಯ ನೆಲ್ಲಿತೀರ್ಥ ಗುಹೆ ನೋಡಲು ನಾಲ್ಕು ಮಿತ್ರರು...
ಗಡಾನ್ ಹತ್ರೀ ಗಡಾಯಿ ಕಲ್ಲು
(ಕುದ್ರೆಯ ನೆರಳಲ್ಲೊರಗಿದ ಕರಿರಾಯ ಭಾಗ 3) ಕಳೆದ ಶತಮಾನದ ಅಪರ ಭಾಗದ ಕಥೆಯಿದು. ಅಂದರೆ ಸನ್ ಸಾವಿರದೊಂಬೈನೂರಾ...
ಬಿರುಮಳೆಗೆ ಜಗ್ಗದ ಕರಿರಾಯ
(ಕುದುರೆಯ ನೆರಳಲ್ಲೊರಗಿದ ಆನೆ ೨) ಬೆಳ್ತಂಗಡಿಯ ದಿಗಂತದಲ್ಲಿ, ಬಂಗಾಡಿ - ಕಿಲ್ಲೂರು ಕೊಳ್ಳದ ಬಾಗಿಲಲ್ಲಿ ನಿಂತ ಏಕಶಿಲಾ...
ಕುದುರೆಯ ನೆರಳಲ್ಲೊರಗಿದ ಆನೆ ೧. ಜಮಾಲಾಬಾದ್
೧೯೬೬ರ ಸುಮಾರಿಗೆ ನಾನಿನ್ನೂ ಬೆಂಗಳೂರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿ. ನನ್ನ ತಂದೆ, ತನ್ನ ಕಾಲೇಜಿನ ಎನ್ಸಿಸಿ...
ಸಾಹಸ ಪ್ರೇಮ
ನಂದಿಬೆಟ್ಟ ನೂರಾರು ಅಡಿ ಎತ್ತರದ ಬೋಳು ಬಂಡೆ. ಟಿಪ್ಪುಸುಲ್ತಾನ್ ಅದರ ಒಂದಂಚಿನಲ್ಲಿ ಅಪರಾಧಿಗಳನ್ನು ನಿಲ್ಲಿಸಿ...
ಅವರಿಲ್ಲದ ಚಾವಡಿ…
ಜೂನ್ ೨೦೦೯ರ ಚರ್ಚೆಗೊಂದು ಚಾವಡಿ ಬಂದ ಕ್ಷಣವೇ ಮಗುಚಿಹಾಕಿ ಮಿತ್ರ ನರೇಂದ್ರ ಪೈ ಅವರಿಗೆ ದೂರವಾಣಿಸಿ ಅಭಿನಂದಿಸಿದೆ;...
ಅಂಡಮಾನ್ ಎಂಟನೇ ಭಾಗ (ಮುಕ್ತಾಯ)
ಪ್ರಿಯ ಆನಂದಾ, [ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನನನ್ನು ಉದ್ದೇಶಿಸಿದ ಅರೆ-ಖಾಸಗಿ ಪತ್ರವಿದು. ಹೆಚ್ಚಿನ...
ಕರ್ನಾಟಕದ ಶಿಕ್ಷಣ ಸಚಿವ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೊಂದು ಬಹಿರಂಗ ಪತ್ರ
ಮಾನ್ಯರೇ ನಾನು ಮೈಸೂರು ವಿಶ್ವವಿದ್ಯಾನಿಲಯದಿಂದ ಇಂಗ್ಲಿಷ್ ಸ್ನಾತಕೋತ್ತರ ಪದವೀಧರನಾಗಿ ಹೊರಬಂದರೂ (೧೯೭೪)...
ಮತ್ತೆ ಅಂಡಮಾನ್ ಬಿಡಿ…
ನನ್ನ ಅಂಡಮಾನ್ ಕಥನದ ನಡುವೆ ಒಮ್ಮೆ ನಿಮ್ಮನ್ನೆಲ್ಲ ದಾರಿ ತಪ್ಪಿಸಿ ನನ್ನ ತಮ್ಮ ಆನಂದ ಕೇವಲ ಕುಟುಂಬಿಕರ ಓದಿಗಾಗಿ...
ಅಂಡಮಾನ್ ಏಳನೇ ಭಾಗ
[ಅಮೆರಿಕಾದಲ್ಲಿರುವ ನನ್ನೊಬ್ಬ ತಮ್ಮ ಆನಂದವರ್ಧನನನ್ನು ಉದ್ದೇಶಿಸಿದ ಅರೆ-ಖಾಸಗಿ ಪತ್ರವಿದು. ಹೆಚ್ಚಿನ ವಿವರಗಳಿಗೆ...
ಮೆಕ್ಸಿಕೋಕ್ಕೆ ಬನ್ನಿ ಅಂಡಮಾನ್ ಇರಲಿ
ದಾರಿ ತಪ್ಪಿದ ಪತ್ರ-ಪ್ರವಾಸ ಕಥನ (ಅಂಡಮಾನ್ ಆರನೇ ಭಾಗ?) ನನ್ನೊಬ್ಬ ತಮ್ಮ ಆನಂದವರ್ಧನ, ನನಗಿಂತ ಐದುವರ್ಷ ಕಿರಿಯ,...
















ತುಂಬ ಉಪಯುಕ್ತ ಮಾಹಿತಿ.