ಜೈಪುರಕ್ಕೆ ಜೈ ಆಗ್ರಾವೂ ಸೈ
‘ಹೊಟ್ಟೆ ಘಟ್ಟಿಯಿರಬೇಕು, ಘಟ್ಟ ಎದುರಾಗಬೇಕು’ ಸಾಹಸ ಯಾತ್ರೆಗಳಲ್ಲಿ ನನ್ನ ಅಭ್ಯಾಸ. ಬೆಳಿಗ್ಗೆ ನಾಲ್ಕು ಗಂಟೆಗೆ ಹೊರಡಬೇಕಾದರೂ ತಿಂಡಿ ಮಾಡಿಕೊಟ್ಟರೆ, ನಾನು ತಿಂದೇ ಹೊರಡುವವ. ಹಾಗೆಂದು ಒಂದೆರಡು ಗಂಟೆ ತಡವಾದರೆ ಕೈಕಾಲೇನು ಬಿದ್ದು ಹೋಗುವುದೂ ಇಲ್ಲ. ಅಂದು (೬-೫-೯೦) ರಣಥೊಂಬರಾ ಕೋಟೆಯನ್ನು ಬೆಳಿಗ್ಗೆ ನೋಡಿ ಬರುವ ಉತ್ಸಾಹದಲ್ಲಿ ತಿಂಡಿ ತಿಂದಿರಲಿಲ್ಲ. ವಾಪಾಸು ಬಂದು ಮುಂದಿನ ಪ್ರಯಾಣಕ್ಕಿಳಿಯುವಾಗ ಮಾತ್ರ (೧೦.೪೫), ಒಂದೆರಡಲ್ಲ ಮೂರ್ನಾಲ್ಕು ಗಂಟೆಗಳೇ ತಡವಾಗಿತ್ತು. ಮೊದಲು ಸಿಕ್ಕ ಧಾಬಾಕ್ಕೇ ನುಗ್ಗಿದೆವು. ಅವನಲ್ಲಿ ಪೂರ್ವ ಸಿದ್ಧತೆಗಳೇನೂ ಇರಲಿಲ್ಲ. ಹಾಗಾಗಿ ನಾವು ಹಳಸಲು ಎಣ್ಣೇಲಿ ಕರಿದ ಪೂರಿ, ಜಿಡ್ಡು ಬಸಿಯುವ ಪರೋಟಾ ಬಿಟ್ಟು, ರೊಟ್ಟಿ, ಮೊಸರು, ಉಪ್ಪಿನ ಕಾಯಿ ಕೇಳಿದೆವು. “ಬನ್ಜಾಯೆಗಾ” (ಮಾಡ್ಕೊಡಾಣಾ) ಎಂದ. ಆದರೆ ಪುಣ್ಯಾತ್ಮ ಮಾಡಿದ್ದು ಅವನದೇ ಕ್ರಮದಲ್ಲಿ. ಹಿಟ್ಟನ್ನು ಕಲೆಸುವಾಗಲೇ ಧಂಡಿಯಾಗಿ ಎಣ್ಣೆ ಸುರಿದುಬಿಟ್ಟ. ಒಂದೊಂದು ಇಂಚು ದಪ್ಪಕ್ಕೆ ಲಟ್ಟಿಸಿ, ಅದೇನು ತವಾವೋ ಚಪ್ಪಟೆ ಬಾಣಲೆಯೋ ಎನ್ನುವಂತೆ ಎಣ್ಣೇ ಸ್ನಾನ ಮಾಡಿಸಿಯೇ ಕೊಟ್ಟ. ಲೇಟ್ ಫೀ ಪೇಡ್ ಬಿರೇಕ್ ಫಾಸ್ಟ್ಗೆ, ಅಡ್ವಾನ್ಸ್ಡ್ ಲಂಚೂ ಸೇರಿಸಿ, ಒಬ್ಬೊಬ್ಬರೂ ಕನಿಷ್ಠ ಆರೆಂಟು ರೊಟ್ಟಿಯಾದರೂ ಹೊಡೀಬೇಕು ಅಂದು ಕೊಂಡಿದ್ದೆವು.
ವಿಳಾಸಹೀನರ ಹುಡುಕಾಟದಲ್ಲಿ
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ - ಅಧ್ಯಾಯ ಮೂವತ್ತಮೂರು ಸುಮಾರು ಮೂರು ವರ್ಷಗಳ ಕಾಲ...
ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು
ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿಮೂರನೇ ಅಧ್ಯಾಯ ೧. ಮನೆಗೊಂದು ಗ್ರಂಥಾಲಯಕ್ಕೆ ಒಂದು ದಿಕ್ಸೂಚೀ ತಿದ್ದುಪಡಿ...
ಚಿಂತನೆಗಳು ಸೂಕ್ಷ್ಮಗೊಂಡದ್ದು
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ - ಅಧ್ಯಾಯ ಮೂವತ್ತೆರಡು ೨೦೦೨ರಲ್ಲಿ ಇರಬೇಕು. ಅಲೋಶಿಯಸ್...
ಬರವಣಿಗೆಯ ನಂಟು
ಬಿ.ಎಂ. ರೋಹಿಣಿಯವರ ಆತ್ಮಕಥಾನಕ ಧಾರಾವಾಹಿ ದೀಪದಡಿಯ ಕತ್ತಲೆ - ಅಧ್ಯಾಯ ಮೂವತ್ತೊಂದು ಬರವಣಿಗೆ ನನ್ನ ಕೈಹಿಡಿದದ್ದು,...
ಯಕ್ಷಗಾನ ಕಲಾರಂಗದ ಮೂರು ಬೈಠಕ್
ಪ್ರಿಯ ಮುರಳಿ ಕಡೇಕಾರರೇ, ಪದಾಧಿಕಾರಿಗಳ ಭಾರಕ್ಕೆ ಕುಸಿಯುವ, ಸ್ಥಾವರ ಕಟ್ಟುವ (ಕಛೇರಿ, ಸಭಾಭವನ ಇತ್ಯಾದಿ)...
ಕಾನನದೊಳಗಿಂದೆದ್ದು ಬಂದವನಾವನಿವಂ?
ಘಟ್ಟ ಇಳಿಯುವವರಿಗೆ ಬಿಸಿಲೆ ಒಂದು ಸುಂದರ ಅನುಭವ. ಅದರಲ್ಲೂ ಮುಖ್ಯವಾಗಿ ಬಿಸಿಲೆ ಹಳ್ಳಿಯಿಂದ ಕುಳ್ಕುಂದ ಗೇಟಿನವರೆಗೆ...
ದೇಹದಾನ
ನನ್ನ ತಂದೆ (ಜಿ.ಟಿ. ನಾರಾಯಣ ರಾವ್) ತಾಯಿಯರು (ಲಕ್ಷ್ಮಿ ದೇವಿ) ವೈದಿಕ ಸಂಸ್ಕಾರಗಳು ಮತ್ತು ಸಾಂಪ್ರದಾಯಿಕ ಆಚರಣೆಗಳು...
ಹೆಸರಿನಲ್ಲೇನಿದೆ…?
ನಿತ್ಯದಂತೆ ರಾತ್ರಿಯ ಟೀವೀ ವಾರ್ತೆ ಕೇಳಿ-ನೋಡುತ್ತಿದ್ದೆ. ಕೆಳ ಅಂಚಿನ ಸುದ್ದಿ ಸುರುಳಿ ಒಮ್ಮೆಗೇ ಸುದ್ಧಿ ಸ್ಫೋಟ...
ಬಿಳಿಹುಲಿಗೆ ಬಂತು ಬಣ್ಣ
೨೦೦೮ರ ಏಪ್ರಿಲ್ ತಿಂಗಳ ಒಂದು ದಿನ ಈ ಬಿಳೀಹುಲಿ ನನ್ನಂಗಡಿ ಹೊಕ್ಕಿತು. ಬೆಂಗಳೂರಿನ ವಿನಾಯಕ ಬುಕ್ ಡಿಸ್ಟ್ರಿಬ್ಯೂಟರ್ಸ್...
ಗ್ರಂಥಾಲಯ ಸಮ್ಮೇಳನದ ನೇಪಥ್ಯದ ಕ(ವ್ಯ)ಥೆ
ಯಾವುದೇ ಸಾಹಿತ್ಯ ಸಮ್ಮೇಳನದ ಅಬ್ಬರಕ್ಕೆ ಕಡಿಮೆಯಿಲ್ಲದಂತೆ (ಪ್ರಥಮ?) ಗ್ರಂಥಾಲಯ ಸಮ್ಮೇಳನ ಕಳೆದ ಜುಲೈಯ ೧೯ ಮತ್ತು...
ಎನ್ = ನಾಮಾಂತರ?
ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆಯ ಹೊಸ ಪುಸ್ತಕ (- ಗುಜರಾತಿನ ವ್ಯಂಗ್ಯ ಕಿರುಗತೆಗಳು - ಅನುವಾದಕ ಡಿ.ಎನ್ ಶ್ರೀನಾಥ್)...
ಪುಸ್ತಕ ಚೋರನೂ ಅಶೋಕನೆಂಬ ರಿಸಿಯೂ…
ಅದೊಂದು ಬೆಳಿಗ್ಗೆ ನನ್ನ ಪುಸ್ತಕ ಮಳಿಗೆಯಲ್ಲಿ ಒಮ್ಮೆಲೆ ನಾಲ್ಕೈದು ಜನ, ಅದರಲ್ಲೂ ಕೆಲವು ಎರಡು ಮೂರು ಜನರ ಗುಂಪುಗಳು...
ಗುಂಡ್ಯಕ್ಕೆ ಗುಮ್ಮ ಬರುತಿದೆ, ಗಡಗಡೆನುತಿದೆ!
ಸರಕಾರದ ಬತ್ತಳಿಕೆಯಲ್ಲಿರುವ ಅಭಿವೃದ್ಧಿ ಎಂಬ ಅಸ್ತ್ರವೇಕೋ ಸಹಜ ಮತ್ತು ಪ್ರಾಕೃತಿಕ ಸತ್ಯಗಳಿಗೆ ವಿರೋಧಿಯಾಗಿ ಕಾಣುವುದು...
ಗ್ರಂಥಾಲಯದ ಆರೋಗ್ಯಕ್ಕೊಂದಿಷ್ಟು ಕಷಾಯ
ಪೀಠಿಕೆ : ಹಾಡಿದ್ದೇ ಹಾಡು ಕನ್ನಡ ಪುಸ್ತಕೋದ್ಯಮದ ಸರಕಾರೀಕರಣವನ್ನು ಸದಾ ಕಟುವಾಗಿ ಟೀಕಿಸುತ್ತಾ ಬಂದವನು ನಾನು....
ಅನ್ಯತ್ರ ಮೋಸಹೋಗಬೇಡಿ, ನಮ್ಮಲ್ಲಿಗೆ ಬನ್ನಿ!
ಬುದ್ಧಿವಂತ ಕೇಳಿದ "ಕಲ್ಪಿಸಿಕೋ - ಅತ್ತ ದರಿ, ಇತ್ತ ಕಮರಿ, ಬೆನ್ನಟ್ಟುತ್ತಿದೆ ಕರಿ, ಎದುರಿಗೊಂದು ಹರಿ! ಪಾರಾಗುವ...















Hi, I'm interested in learning more about your service. Please send details. (ref:dnh7hghrxvzui44q)