ತಪ್ಪಿದ ಬದರಿ ಮತ್ತು ಮಾರ್ಗ ಕ್ರಮಣ

ತಪ್ಪಿದ ಬದರಿ ಮತ್ತು ಮಾರ್ಗ ಕ್ರಮಣ

ಕೇದಾರ ನಾಥದ ‘ವಿಜಯ’ಕ್ಕೆ ನಾನು ಅನುಭವಿಸಿದ ನೋವು ಹೆಚ್ಚೇ ಆಗಿತ್ತು. ಹಾಗಾಗಿ ಮರುದಿನದ ಬದರೀ ಯಾನದ ಯೋಚನೆಯನ್ನು ನಾನು ಮತ್ತು ದೇವಕಿ ಕೈ ಬಿಟ್ಟೆವು. ಸೋನ್ ಪ್ರಯಾಗಿನಿಂದ ಬದರಿಗೆ ಹೋಗಿ ಮರಳುವಲ್ಲಿ ಕವಲೂರಾಗಿ ಸಿಗುವ ಊರು ಕರ್ಣಪ್ರಯಾಗ್. ಅಲ್ಲಿ ನಮಗೆ ಎರಡು ದಿನದ ವಿಶ್ರಾಂತಿ, ಇತರರು ಬದರೀನಾಥಕ್ಕೆ. (ಇಂದು ದಾರಿಯ ಸಾಧ್ಯತೆಗಳು ತುಂಬ ಬದಲಿವೆ, ಬಿಡಿ.) ತಂಡವಾದರೂ ಸಾಕಷ್ಟು ಸೋತಿದ್ದುದರಿಂದ ಬೆಳಿಗ್ಗೆ (೨೦-೫-೯೦) ಸುಮಾರು ಎಂಟು ಗಂಟೆಯ ಹೊತ್ತಿಗೆ ಎಲ್ಲರು ಒಟ್ಟಾಗಿಯೇ ಸೋನ್ ಪ್ರಯಾಗ್ ಬಿಟ್ಟೆವು. ರುದ್ರಪ್ರಯಾಗದಲ್ಲೊಂದು ಸೈನ್ಯದ ಆಸ್ಪತ್ರೆ ಕಾಣಿಸಿತು. ಅಲ್ಲಿ ವೈದ್ಯರಿನ್ನೂ ಬಂದಿರಲಿಲ್ಲ. ಹಿರಿಯ ಶುಶ್ರೂಷಕ ಸಹೃದಯತೆಯಲ್ಲೇ ನನ್ನ ಪರೀಕ್ಷೆ ಮಾಡಿದರು. ಮತ್ತೆ ತಾನು ಸೈನಿಕ ಆಸ್ಪತ್ರೆಯ ನಿಯಮಾನುಸಾರ ಸಾರ್ವಜನಿಕ ಚಿಕಿತ್ಸೆ ಕೊಡಲಾಗದ್ದಕ್ಕೆ ಮೊದಲು ಕ್ಷಮೆ ಯಾಚಿಸಿದರು. ಅನಂತರ “ಈಗಾಗಲೇ ನಿಮ್ಮಲ್ಲಿ ಇರುವ ನೋವು ಉಪಶಮನಕಾರಕ ನುಂಗಿ ಸುಧಾರಿಸಿಕೊಳ್ಳಿ. ಊರಿಗೆ ಹೋಗಿ ಅವಶ್ಯ ಶಸ್ತ್ರಚಿಕಿತ್ಸೆಗೆ ಒಳಗಾಗಿ” ಎಂದು ಸಲಹೆಯನ್ನಷ್ಟೇ ಕೊಟ್ಟರು.

read more
ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಕನ್ನಡ ಕಾದಂಬರಿ ನೂರು ವರ್ಷ – ಉದ್ಯಮದ ದೃಷ್ಟಿಯಲ್ಲಿ

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿನೈದನೇ ಅಧ್ಯಾಯ [ಭಂಡಾರ್ಕರ್ಸ್ ಕಾಲೇಜು ಕುಂದಾಪುರ ಏರ್ಪಪಡಿಸಿದ್ದ ಕನ್ನಡ...

read more

Category

Latest Comments

  1. ನಿಜ. ಶ್ರೀಕೃಷ್ಣನೇ ಇಂದ್ರ ಪೂಜೆಯನ್ನುಊರವರಿಂದ ಧಿಕ್ಕರಿಸಿ, ತಮ್ಮ ಹಸುಗಳಿಗೆ ಹಸಿರು, ನೀರು ಕೊಡುವ ಪರ್ವತವನ್ನೇ ಪೂಜಿಸಿ ಎಂದು ಸಾಧಿಸಿದ ದೃಷ್ಟಾಂತ ಮರೆಯಲುಂಟೇ...

  2. ಶಿವರಾಮ ಕಾರಂತರ ಎರಡನೇ ಅಣ್ಣ - ವಾಸುದೇವ ಕಾರಂತ, ನಿವೃತ್ತ ವಿದ್ಯುತ್ ಇಂಜಿನಿಯರ್, ಮನೆಯಲ್ಲಿ ದೇವರು, ದೇವರನ್ನು ನಂಬುವ, ಬ್ರಾಹ್ಮಣ್ಯದ ರಕ್ಷಣೆ, ಪುನರ್ಜನ್ಮ..... ಹೀಗೆ ಹಲವು ಪುಸ್ತಕಗಳನ್ನು…

  3. 2010 ರಲ್ಲಿ ನಾವು ಮನಾಲಿಗೆ ಹೋಗಿದ್ದು, ಹಿಡಿಂಬಾ ದೇವಾಲಯ ನೋಡಿದ್ದು ಚಂದದ ನೆನಪು. ಹಿಡಿಂಬಾ ದೇವಿ ಅಲ್ಲಿನ ಒಂದು ಬೃಹತ್ ಪೈನ್ ಮರ! ಹಾಗೇ ಘಟೋತ್ಕಜ ಮರ!…

  4. ಲೇಖನ ಓದಿದಮೇಲೆ ಅನ್ನಿಸಿದ್ದು: ನೀವು ದಯವಿಟ್ಟು ತೀರ್ಥಕ್ಷೇತ್ರಗಳಿಗೆ ಹೋಗದಿರುವುದೇ ಲೇಸು- ಆ ಕುರಿತು ನಿಮ್ಮ ವ್ಯಂಗ್ಯವೇ ಹೆಚ್ಚು- ಅಡಿಗರ ಮಾತಿನಲ್ಲಿ “ ಇದನ್ನು ಬಯಸಿರಲಿಲ್ಲ” ನಿಮ್ಮಿಂದ ವಿವರವೂ…

ಕಾನನದೊಳಗಿಂದೆದ್ದು ಬಂದವನಾವನಿವಂ?

ಕಾನನದೊಳಗಿಂದೆದ್ದು ಬಂದವನಾವನಿವಂ?

ಘಟ್ಟ ಇಳಿಯುವವರಿಗೆ ಬಿಸಿಲೆ ಒಂದು ಸುಂದರ ಅನುಭವ. ಅದರಲ್ಲೂ ಮುಖ್ಯವಾಗಿ ಬಿಸಿಲೆ ಹಳ್ಳಿಯಿಂದ ಕುಳ್ಕುಂದ ಗೇಟಿನವರೆಗೆ...

read more
ಎನ್ = ನಾಮಾಂತರ?

ಎನ್ = ನಾಮಾಂತರ?

ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆಯ ಹೊಸ ಪುಸ್ತಕ (- ಗುಜರಾತಿನ ವ್ಯಂಗ್ಯ ಕಿರುಗತೆಗಳು - ಅನುವಾದಕ ಡಿ.ಎನ್ ಶ್ರೀನಾಥ್)...

read more