ಜೈಪುರಕ್ಕೆ ಜೈ ಆಗ್ರಾವೂ ಸೈ

ಜೈಪುರಕ್ಕೆ ಜೈ ಆಗ್ರಾವೂ ಸೈ

‘ಹೊಟ್ಟೆ ಘಟ್ಟಿಯಿರಬೇಕು, ಘಟ್ಟ ಎದುರಾಗಬೇಕು’ ಸಾಹಸ ಯಾತ್ರೆಗಳಲ್ಲಿ ನನ್ನ ಅಭ್ಯಾಸ. ಬೆಳಿಗ್ಗೆ ನಾಲ್ಕು ಗಂಟೆಗೆ ಹೊರಡಬೇಕಾದರೂ ತಿಂಡಿ ಮಾಡಿಕೊಟ್ಟರೆ, ನಾನು ತಿಂದೇ ಹೊರಡುವವ. ಹಾಗೆಂದು ಒಂದೆರಡು ಗಂಟೆ ತಡವಾದರೆ ಕೈಕಾಲೇನು ಬಿದ್ದು ಹೋಗುವುದೂ ಇಲ್ಲ. ಅಂದು (೬-೫-೯೦) ರಣಥೊಂಬರಾ ಕೋಟೆಯನ್ನು ಬೆಳಿಗ್ಗೆ ನೋಡಿ ಬರುವ ಉತ್ಸಾಹದಲ್ಲಿ ತಿಂಡಿ ತಿಂದಿರಲಿಲ್ಲ. ವಾಪಾಸು ಬಂದು ಮುಂದಿನ ಪ್ರಯಾಣಕ್ಕಿಳಿಯುವಾಗ ಮಾತ್ರ (೧೦.೪೫), ಒಂದೆರಡಲ್ಲ ಮೂರ್ನಾಲ್ಕು ಗಂಟೆಗಳೇ ತಡವಾಗಿತ್ತು. ಮೊದಲು ಸಿಕ್ಕ ಧಾಬಾಕ್ಕೇ ನುಗ್ಗಿದೆವು. ಅವನಲ್ಲಿ ಪೂರ್ವ ಸಿದ್ಧತೆಗಳೇನೂ ಇರಲಿಲ್ಲ. ಹಾಗಾಗಿ ನಾವು ಹಳಸಲು ಎಣ್ಣೇಲಿ ಕರಿದ ಪೂರಿ, ಜಿಡ್ಡು ಬಸಿಯುವ ಪರೋಟಾ ಬಿಟ್ಟು, ರೊಟ್ಟಿ, ಮೊಸರು, ಉಪ್ಪಿನ ಕಾಯಿ ಕೇಳಿದೆವು. “ಬನ್ಜಾಯೆಗಾ” (ಮಾಡ್ಕೊಡಾಣಾ) ಎಂದ. ಆದರೆ ಪುಣ್ಯಾತ್ಮ ಮಾಡಿದ್ದು ಅವನದೇ ಕ್ರಮದಲ್ಲಿ. ಹಿಟ್ಟನ್ನು ಕಲೆಸುವಾಗಲೇ ಧಂಡಿಯಾಗಿ ಎಣ್ಣೆ ಸುರಿದುಬಿಟ್ಟ. ಒಂದೊಂದು ಇಂಚು ದಪ್ಪಕ್ಕೆ ಲಟ್ಟಿಸಿ, ಅದೇನು ತವಾವೋ ಚಪ್ಪಟೆ ಬಾಣಲೆಯೋ ಎನ್ನುವಂತೆ ಎಣ್ಣೇ ಸ್ನಾನ ಮಾಡಿಸಿಯೇ ಕೊಟ್ಟ. ಲೇಟ್ ಫೀ ಪೇಡ್ ಬಿರೇಕ್ ಫಾಸ್ಟ್‍ಗೆ, ಅಡ್ವಾನ್ಸ್ಡ್ ಲಂಚೂ ಸೇರಿಸಿ, ಒಬ್ಬೊಬ್ಬರೂ ಕನಿಷ್ಠ ಆರೆಂಟು ರೊಟ್ಟಿಯಾದರೂ ಹೊಡೀಬೇಕು ಅಂದು ಕೊಂಡಿದ್ದೆವು.

read more
ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿಮೂರನೇ ಅಧ್ಯಾಯ ೧. ಮನೆಗೊಂದು ಗ್ರಂಥಾಲಯಕ್ಕೆ ಒಂದು ದಿಕ್ಸೂಚೀ ತಿದ್ದುಪಡಿ...

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಕಾನನದೊಳಗಿಂದೆದ್ದು ಬಂದವನಾವನಿವಂ?

ಕಾನನದೊಳಗಿಂದೆದ್ದು ಬಂದವನಾವನಿವಂ?

ಘಟ್ಟ ಇಳಿಯುವವರಿಗೆ ಬಿಸಿಲೆ ಒಂದು ಸುಂದರ ಅನುಭವ. ಅದರಲ್ಲೂ ಮುಖ್ಯವಾಗಿ ಬಿಸಿಲೆ ಹಳ್ಳಿಯಿಂದ ಕುಳ್ಕುಂದ ಗೇಟಿನವರೆಗೆ...

read more
ಎನ್ = ನಾಮಾಂತರ?

ಎನ್ = ನಾಮಾಂತರ?

ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆಯ ಹೊಸ ಪುಸ್ತಕ (- ಗುಜರಾತಿನ ವ್ಯಂಗ್ಯ ಕಿರುಗತೆಗಳು - ಅನುವಾದಕ ಡಿ.ಎನ್ ಶ್ರೀನಾಥ್)...

read more
ಗುಂಡ್ಯಕ್ಕೆ ಗುಮ್ಮ ಬರುತಿದೆ, ಗಡಗಡೆನುತಿದೆ!

ಗುಂಡ್ಯಕ್ಕೆ ಗುಮ್ಮ ಬರುತಿದೆ, ಗಡಗಡೆನುತಿದೆ!

ಸರಕಾರದ ಬತ್ತಳಿಕೆಯಲ್ಲಿರುವ ಅಭಿವೃದ್ಧಿ ಎಂಬ ಅಸ್ತ್ರವೇಕೋ ಸಹಜ ಮತ್ತು ಪ್ರಾಕೃತಿಕ ಸತ್ಯಗಳಿಗೆ ವಿರೋಧಿಯಾಗಿ ಕಾಣುವುದು...

read more