ದಿಲ್ಲಿಯಿಂದ ಡೆಹ್ರಾಡೂನಿಗೆ…

ದಿಲ್ಲಿಯಿಂದ ಡೆಹ್ರಾಡೂನಿಗೆ…

ದಿಲ್ಲಿ ದಾಳಿಗೆ (೯-೫-೯೦) ಬೆಳಿಗ್ಗೆ ಆರಕ್ಕೆ ನಾಂದಿಯೇನೋ ಹಾಡಿದೆವು. ಆದರೆ ನನ್ನ ಚಕ್ರವೊಂದು ನಿಟ್ಟುಸಿರು ಬಿಟ್ಟು, ಒಂದು ಗಂಟೆ ತಡವಾಗಿ ಮುಂದುವರಿದೆವು. ಆ ದಾರಿ ಖ್ಯಾತ ಪ್ರವಾಸೀ ತ್ರಿಕೋನದ ಬಲ ಭುಜ, ವಾಸ್ತವದಲ್ಲೂ ಬಹುತೇಕ ಸರಳ ರೇಖೆಯಂತೇ ಇದೆ. ಗಗನಗಾಮೀ ನಕ್ಷಾ ನೋಟದಲ್ಲಿ ಮಾತ್ರ ಉದ್ದಕ್ಕೂ ಯಮುನಾ ನದಿ ದೀರ್ಘ ಬಳಕುಗಳ ಸಾಂಗತ್ಯ ಕೊಡುತ್ತದೆ. ಮಾರ್ಗದ ಕಠೋರ ತಪೋನಿಷ್ಠೆಯನ್ನು ಮುರಿಯ ಬಂದ ಅಪ್ಸರೆಯಂತೆ ನಲಿದಿದೆ. ದಾರಿಗೆ ಈ ಅಲೌಕಿಕ ದೃಶ್ಯ ಅಗೋಚರವಾದ್ದರಿಂದ ಸುಮಾರು ಇನ್ನೂರು ಕಿಮೀ ಉದ್ದದ್ದ ದಿಲ್ಲಿಯ ಜಪವನ್ನೇ ನಾವು ಮಾಡಿಕೊಂಡಿದ್ದೆವು. ಸುಮಾರು ಮಧ್ಯಂತರದಲ್ಲಿದ್ದ ಏಕೈಕ ಬದಲಾವಣೆ ಮಥುರಾ. ಪುರಾಣ, ಇತಿಹಾಸಗಳಿಗೆ ಇಂದೂ ಈ ನೆಲದಲ್ಲಿ ಸಾಕಷ್ಟು ಪುರಾವೆಗಳು ಇವೆ. ಅವನ್ನು ವೈಚಾರಿಕವಾಗಿ ಗುರುತಿಸಿಕೊಳ್ಳುವ ಸಂತೋಷವೇ ನಿಜ ಸಂಸ್ಕೃತಿ. ಅದು ಬಿಟ್ಟು, ಅವನ್ನು ಯಾವುದೋ ಒಂದು ಕಾಲಘಟ್ಟಕ್ಕೆ ಸೀಮಿತಗೊಳಿಸಿ, ಇತಿಹಾಸವನ್ನು ತಿದ್ದುವ ಪ್ರಯತ್ನ ಮಾಡುವುದು ವಿಕೃತಿ. ನಮ್ಮೀ ಬೈಕ್ ಯಾನದಲ್ಲಿ ಬಾದಾಮಿಯಿಂದ ಆಗ್ರಾದವರೆಗಿನ ಐತಿಹಾಸಿಕ ರಚನೆಗಳಲ್ಲಿ ಹೆಚ್ಚಾಗಿ ಮೆರೆಯುವುದು – ವಿವಿಧ ಕಾಲಗಳ ವೈಯಕ್ತಿಕ ಮಹತ್ವಾಕಾಂಕ್ಷೆ ಮಾತ್ರ. ಅವರಲ್ಲಿ ಹೆಚ್ಚಿನವರಿಗೆ ಖಾಯಂ ಯಾವ ಮತಧರ್ಮದ ಸೋಂಕೂ ಇಲ್ಲ, ಜನಾಂಗ ಭಾಷೆಗಳ ದುರಭಿಮಾನವೂ ಇಲ್ಲ. ಇವನ್ನು ಗ್ರಹಿಸುವಲ್ಲಿ ಎಲ್ಲ ಕಾಲದಲ್ಲೂ ಇದ್ದಂತೆ ದೊಡ್ಡ ಅಡ್ಡಿ ವಿಚಾರಹೀನ ಆರಾಧಕರು ಮತ್ತು ಅವರನ್ನು ಸ್ವಾರ್ಥ ಸಾಧನೆಗಾಗಿ ಬಳಸಿಕೊಳ್ಳುವ ರಾಜಕಾರಣಿಗಳು.

read more
ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕೋದ್ಯಮದ ನೆಲಕ್ಕೆ ಮೌಲ್ಯ ಕಚ್ಚಿಸುವ ಹನಿಗಳು

ಪುಸ್ತಕ ಮಾರಾಟ ಹೋರಾಟ (೧೯೯೯) ಪುಸ್ತಕದ ಹದಿಮೂರನೇ ಅಧ್ಯಾಯ ೧. ಮನೆಗೊಂದು ಗ್ರಂಥಾಲಯಕ್ಕೆ ಒಂದು ದಿಕ್ಸೂಚೀ ತಿದ್ದುಪಡಿ...

read more

Category

Latest Comments

  1. ಧನ್ಯವಾದಗಳು. ಮುಂದಿನ ಕಂತು - ಜೈಪುರದ ಎರಡನೇ ದಿನದ ಕಥನ ಈಗ ಪ್ರಕಟಿಸಿದ್ದೇನೆ... ಅವಶ್ಯ ಓದಿ... ಆನಂದಿಸಿ.... ಪ್ರತಿಕ್ರಿಯಿಸಿ ನನ್ನನ್ನೂ ಆನಂದದಲ್ಲಿ ಪಾಲ್ಗೊಳ್ಳಿ 🙂

  2. ವಿಶೇಷ ಸೂಚನೆ: ಲೇಖನದ ಕೊನೆಯಲ್ಲಿರುವ ಎಂಟೂ ಸೇತುಗಳು (ಲಿಂಕ್ಸ್) ಕೆಲಸ ಮಾಡದಿದ್ದರೆ ದಯವಿಟ್ಟು ಈ ಸೇತು ಬಳಸಿ: https://youtube.com/playlist?list=PLYKOH-YtpDspXQKTGV3NY2B9IBdlCEzs7&si=JR143Wll9pTSfZIE

ಕಾನನದೊಳಗಿಂದೆದ್ದು ಬಂದವನಾವನಿವಂ?

ಕಾನನದೊಳಗಿಂದೆದ್ದು ಬಂದವನಾವನಿವಂ?

ಘಟ್ಟ ಇಳಿಯುವವರಿಗೆ ಬಿಸಿಲೆ ಒಂದು ಸುಂದರ ಅನುಭವ. ಅದರಲ್ಲೂ ಮುಖ್ಯವಾಗಿ ಬಿಸಿಲೆ ಹಳ್ಳಿಯಿಂದ ಕುಳ್ಕುಂದ ಗೇಟಿನವರೆಗೆ...

read more
ಎನ್ = ನಾಮಾಂತರ?

ಎನ್ = ನಾಮಾಂತರ?

ಅಂಕಿತ ಪುಸ್ತಕ ಪ್ರಕಾಶನ ಸಂಸ್ಥೆಯ ಹೊಸ ಪುಸ್ತಕ (- ಗುಜರಾತಿನ ವ್ಯಂಗ್ಯ ಕಿರುಗತೆಗಳು - ಅನುವಾದಕ ಡಿ.ಎನ್ ಶ್ರೀನಾಥ್)...

read more
ಗುಂಡ್ಯಕ್ಕೆ ಗುಮ್ಮ ಬರುತಿದೆ, ಗಡಗಡೆನುತಿದೆ!

ಗುಂಡ್ಯಕ್ಕೆ ಗುಮ್ಮ ಬರುತಿದೆ, ಗಡಗಡೆನುತಿದೆ!

ಸರಕಾರದ ಬತ್ತಳಿಕೆಯಲ್ಲಿರುವ ಅಭಿವೃದ್ಧಿ ಎಂಬ ಅಸ್ತ್ರವೇಕೋ ಸಹಜ ಮತ್ತು ಪ್ರಾಕೃತಿಕ ಸತ್ಯಗಳಿಗೆ ವಿರೋಧಿಯಾಗಿ ಕಾಣುವುದು...

read more